Latestರಾಜಕೀಯರಾಜ್ಯವೈರಲ್ ನ್ಯೂಸ್

ಅವೈಜ್ಞಾನಿಕವಾಗಿ ವಾಹನ ಸವಾರರನ್ನು ತಡೆಯಬೇಡಿ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ ಗೃಹಸಚಿವ..! ಅಧಿಕಾರಿಗಳ ಜೊತೆ ಜಿ ಪರಮೇಶ್ವರ್ ಸಭೆ

483

ನ್ಯೂಸ್ ನಾಟೌಟ್: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮಗು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ ಪೊಲೀಸರಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.

ಮಂಡ್ಯದಲ್ಲಿ ಸಂಭವಿಸಿದ ಘಟನೆ ನಾವೆಲ್ಲ ತಲೆತಗ್ಗಿಸುವಂತಹದ್ದು. ಘಟನೆ ಸಂಬಂಧ 3 ಪೊಲೀಸರನ್ನು ಅಮಾನತ್ತು ಮಾಡಲಾಗಿದೆ. ಮತ್ತೆ ಇಂತಹ ಘಟನೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಇವತ್ತು ಸಭೆ ಕರೆದಿದ್ದೇನೆ, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದರು. ಮಂಡ್ಯದ ಘಟನೆಯಲ್ಲಿ ಪೊಲೀಸರು ಮಾನವೀಯತೆ ತೋರಲಿಲ್ಲ, ಸ್ವಂತಿಕೆ ಪ್ರದರ್ಶಿಸಲಿಲ್ಲ. ಸರಿಯಾಗಿ ನಡೆದುಕೊಳ್ಳಲಿಲ್ಲ. ಪೊಲೀಸರು ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ. ಪೊಲೀಸರು ಎಲ್ಲೋ ಮೂಲೆಯಲ್ಲಿ ನಿಂತು ದಿಢೀರ್ ಆಗಿ ಎದುರು ಬಂದು ತಡೆಯುತ್ತಾರೆ. ಪೊಲೀಸರು ಹೀಗೆ ಮಾಡಬಾರದು. ತಪಾಸಣೆ ನಡೆಸಲು ಅದರದ್ದೇ ಆದ ಒಂದು ಪದ್ಧತಿ ಇದೆ. ಅದನ್ನು ಪೊಲೀಸರು ಅನುಸರಿಸಬೇಕು ಎಂದು ಪರಮೇಶ್ವರ್ ಖಡಕ್ ಸೂಚನೆ ನೀಡಿದರು.

ಸ್ಪೀಡಾಗಿ ಬರುವ ಬೈಕ್​ ಸವಾರರನ್ನು ಪೊಲೀಸರು ದಿಢೀರಾಗಿ ಎದುರು ಬಂದು ತಡೆಯುತ್ತಾರೆ. ಇದರಿಂದ ಸವಾರರು ವಿಚಲಿತರಾಗುತ್ತಾರೆ. ಈ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆ ಮಾಡಿ ಸರಿಯಾದ ಸೂಚನೆ ಕೊಡುತ್ತೇವೆ ಎಂದು ಹೇಳಿದರು.

ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರೂ ಪೊಲೀಸರು ಬಿಡಲಿಲ್ಲ. ಇಂತಹ ಸಂದರ್ಭಗಳಲ್ಲಿ ಪೊಲೀಸರು ಸ್ವಂತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು. ಮಂಡ್ಯದಲ್ಲಿ ಸೋಮವಾರ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ಮಾಡುವ ವೇಳೆ ಬೈಕ್ ಸವಾರ ಪೊಲೀಸರ ಮುಂದೆ ನಿಲ್ಲಿಸಲು ಹೋಗಿ ಆಯತಪ್ಪಿದ ಕಾರಣ ಮೂರು ವರ್ಷ ಮಗು ಕೆಳಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿತ್ತು.

ವಿದೇಶ ಪ್ರವಾಸದ ವೇಳೆ ಫ್ರಾನ್ಸ್ ಅಧ್ಯಕ್ಷನಿಗೆ ಹೊಡೆದರಾ ಪತ್ನಿ..?​ ವಿಮಾನದೊಳಗಿನ ವಿಡಿಯೋ ವೈರಲ್..!

ನಿಗೂಢವಾಗಿ ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ಶವವಾಗಿ ಪತ್ತೆ..! ಈ ಬಗ್ಗೆ ಪೊಲೀಸರು ಹೇಳಿದ್ದೇನು..?

ರಾಮಕುಂಜ: ಭಾರೀ ಮಳೆಗೆ ಕಾರಿನ ಮೇಲೆ ಬಿದ್ದ ಮರ..! ನಾಲ್ವರು ಪ್ರಾಣಾಪಾಯದಿಂದ ಪಾರು

See also  ಸರ್ಕಾರಿ ಬಸ್ ನಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣ..! ಒಂದೇ ತಿಂಗಳಲ್ಲಿ 7 ಲಕ್ಷಕ್ಕೂ ಅಧಿಕ ದಂಡ ವಸೂಲಿ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget