ಬೆಂಗಳೂರು: ಹನಿಟ್ರ್ಯಾಪ್ ಆರೋಪದ ಮೇಲೆ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಕಾಂಗ್ರೆಸ್ ನಾಯಕಿಯೊಬ್ಬಳನ್ನ ಬಂಧಿಸಿದ್ದಾರೆ. ಈಕೆಯ ವಿರುದ್ಧ ಪ್ರಭಾವಿ ರಾಜಕಾರಣಿಗಳು, ಐಪಿಎಸ್, ಐಎಎಸ್ ಅಧಿಕಾರಿಗಳೂ ಸೇರಿದಂತೆ ಹೈ-ಪ್ರೊಫೈಲ್ ವ್ಯಕ್ತಿಗಳನ್ನ ಯಾಮಾರಿಸಿ ಹೈಟೆಕ್ ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಹಣ ಪೀಕಿದ್ದಾಳೆ ಎನ್ನುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ನಾಯಕಿ ವಿದ್ಯಾ ಎನ್ನುವವರು ಇದೀಗ ಹನಿಟ್ರ್ಯಾಪ್ ಆರೋಪದಲ್ಲಿ ಬಂಧಿತರಾಗಿರುವವರು. ಎಐಸಿಸಿ ಸದಸ್ಯೆ ಆಗಿರುವ ವಿದ್ಯಾ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಕೂಡ ಆಗಿದ್ದರೆ. ಆರೋಪಿ ಸ್ಥಾನದಲ್ಲಿರುವ ವಿದ್ಯಾ, ತನ್ನ ಮೇಕ್ ಅಪ್ ಭರಿತ ಸೌಂದರ್ಯದ ಮೂಲಕವೇ ದೆಹಲಿ ನಾಯಕರನ್ನ ಸೆಳೆದು ಹನಿಟ್ರ್ಯಾಪ್ ಮಾಡುತ್ತಿದ್ದಳು ಎನ್ನಲಾಗಿದೆ.