ಕೊಡಗು

ಹೊನ್ನಾವರ: ಸ್ವಚ್ಛ ವಿದ್ಯಾಲಯ ಪುರಸ್ಕಾರ ಗೌರವ

383

ನ್ಯೂಸ್ ನಾಟೌಟ್ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪ್ರತಿಷ್ಠಿತ ಎಂ.ಪಿ.ಇ.ಸೊಸೈಟಿಯ ಸೆಂಟ್ರಲ್ ಶಾಲೆಗೆ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಗೌರವ ದೊರಕಿದೆ.

ಕಾರವಾರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಪುರಸ್ಕಾರವನ್ನು ಹಸ್ತಾಂತರಿಸಲಾಯಿತು. ಶಾಲೆಯಲ್ಲಿ ಸ್ವಚ್ಛತೆಗೆ ಅಳವಡಿಸಲಾಗಿರುವ ವಿವಿಧ ಕ್ರಮಗಳು ಹಾಗೂ ಪರಿಸರ ಸ್ನೇಹಿ ಚಟುವಟಿಕೆಗಳು ಮತ್ತು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಯೋಜನೆಗಳನ್ನು ಗಮನಿಸಿ ಈ ಪುರಸ್ಕಾರ ದೊರಕಿದೆ. ಒಟ್ಟು 92% ಅಂಕಗಳೊಂದಿಗೆ ಸ್ವಚ್ಛ ವಿದ್ಯಾಲಯ ಪುರಸ್ಕಾರ ಲಭಿಸಿದೆ. ಶಾಲೆಯ ಪ್ರಾಂಶುಪಾಲೆ ಕಾಂತಿ ಭಟ್ ಹಾಗೂ ಸಹ ಶಿಕ್ಷಕಿಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದು ಪ್ರಶಸ್ತಿ ಸ್ವೀಕರಿಸಿದರು. ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಿಯಾಂಗ ಎಂ. , ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ , ಉಪನಿರ್ದೇಶಕ ಈಶ್ವರ್ ನಾಯ್ಕ್ ಮತ್ತಿತರರು ಹಾಜರಿದ್ದರು.

See also  ಮಡಿಕೇರಿ:ಐಎಎಸ್ ಅಧಿಕಾರಿ ವಿರುದ್ಧ ಪತ್ನಿಯಿಂದ ವರದಕ್ಷಿಣೆ ಕಿರುಕುಳದ ಆರೋಪ,ದೂರು ದಾಖಲು
  Ad Widget   Ad Widget     Ad Widget   Ad Widget   Ad Widget   Ad Widget