ನ್ಯೂಸ್ ನಾಟೌಟ್ : ಪ್ರೀತಿಸುವುದಿಲ್ಲ ಎಂದದ್ದಕ್ಕೆ 22 ವರ್ಷದ ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಹೋಟೆಲ್ ರೂಮ್ ಗೆ ಕರೆಸಿ ಆತನ ಗುಪ್ತಾಂಗವನ್ನು ಕತ್ತರಿಸಿದ್ದಾಳೆ. ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದೆ. 24 ವರ್ಷದ ತನ್ನ ಪ್ರಿಯಕರನಿಗೆ ಬೇರೊಬ್ಬ ಹುಡುಗಿಯ ಜೊತೆ ಮದುವೆ ನಿಶ್ಚಯವಾಗಿರುವುದು ಗೊತ್ತಾದ ಬಳಿಕ ಪ್ರಿಯತಮೆ ಈ ಕ್ರೂರ ಕೃತ್ಯ ಎಸಗಿದ್ದಾಳೆ. ಇವರಿಬ್ಬರೂ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಹಲ್ಲೆಯ ನಂತರ ಯುವತಿ ತನ್ನ ಕೈಯ ನರವನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಮಲು ಪದಾರ್ಥ ನೀಡಿ ತನ್ನ ಮರ್ಮಾಂಗಕ್ಕೆ ಕತ್ತರಿಸುತ್ತಿದ್ದಂತೆಯೇ ಯುವಕ ಪೊಲೀಸರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕ ಮದುವೆಗೆ ತಯಾರಿ ನಡೆಸುತ್ತಿರುವ ವಿಷಯ ಯುವತಿಗೆ ಗೊತ್ತಾಗಿದೆ. ಹೀಗಾಗಿ ಆತನನ್ನು ಕೊನೆಯ ಬಾರಿ ನೋಡಬೇಕು ಎಂದು ಹೇಳಿ ಹೋಟೆಲ್ ಕೊಠಡಿಗೆ ಕರೆಸಿಕೊಂಡಿದ್ದಾಳೆ. ಬಳಿಕ ಯುವತಿ ಯುವಕನ ಗುಪ್ತಾಂಗವನ್ನು ಕತ್ತರಿಸಿದ್ದಾಳೆ. ಪೊಲೀಸರು ತಕ್ಷಣ ಬಂದು ಆಸ್ಪತ್ರೆಗೆ ಸೇರಿಸಿದ ಕಾರಣ ಯುವತಿ ಹಾಗೂ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿಯೇ ಪ್ರಿಯತಮೆ ಈ ಕೃತ್ಯವೆಸಗಿದ್ದಾಳೆ ಎಂದು ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆದರೆ ಘಟನೆ ನಡೆದಿರುವುದು ಹೋಟೆಲ್ ನಲ್ಲಿ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದು, ಇಬ್ಬರ ಮೊಬೈಲ್ ಫೋನ್ ಗಳನ್ನೂ ವಶಪಡಿಸಿಕೊಂಡಿದ್ದಾರೆ.
Click