Latestಕ್ರೈಂರಾಜ್ಯಶಿಕ್ಷಣಸಿನಿಮಾ

ಖ್ಯಾತ ಸಾಹಿತಿ ಎಚ್.​ಎಸ್​ ವೆಂಕಟೇಶಮೂರ್ತಿ ನಿಧನ..! ರಾಷ್ಟ್ರಪ್ರಶಸ್ತಿ ವಿಜೇತ ‘ಚಿನ್ನಾರಿ ಮುತ್ತ’ ಚಿತ್ರಕ್ಕೆ ಕಥೆ ಮತ್ತು ಹಾಡುಗಳುನ್ನು ಬರೆದಿದ್ದ ಕವಿ

344

ನ್ಯೂಸ್ ನಾಟೌಟ್: ಕನ್ನಡದ ಗೀತ ಸಾಹಿತಿ, ಕವಿ, ಕಥೆಗಾರ, ಸಂಭಾಷಣಕಾರ ಎಚ್ ​ಎಸ್​ ವೆಂಕಟೇಶಮೂರ್ತಿ ಇಂದು(ಮೇ.30) ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

1944ರ ಜೂನ್ 23ರಂದು ವೆಂಕಟೇಶಮೂರ್ತಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊದಿಗೆರೆ ಎಂಬ ಹಳ್ಳಿಯಲ್ಲಿ ಜನಿಸಿದರು.
ಕನ್ನಡದಲ್ಲಿ ಕಥನ ಕವನಗಳು ಎಂಬ ಮಹಾಪ್ರಬಂಧ ಮಂಡಿಸಿ ಪಿಎಚ್.ಡಿ. ಪದವಿ ಪಡೆದರು. 1973ರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ನೇಮಕ ಆದರು. 2000ರಲ್ಲಿ ನಿವೃತ್ತಿ ಹೊಂದಿದರು. ಆ ಬಳಿಕವೂ ಬೆಂಗಳೂರನಲ್ಲೇ ನೆಲಿಸಿದ್ದ ಅವರು, ಬರಹ ಕೃಷಿಯಲ್ಲಿ ತೊಡಗಿಕೊಂಡಿದ್ದರು.

ವೆಂಕಟೇಶಮೂರ್ತಿಗೆ ಬಣ್ಣದ ಲೋಕದ ಮೇಲೆ ಒಲವು ಮೂಡಲು ಕಾರಣ ಆಗಿದ್ದು ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು. ಅವರು ಬಾಲ್ಯದಲ್ಲಿ ಇದ್ದಾಗ ಸಾಕಷ್ಟು ಕೃತಿಗಳನ್ನು ಅವರು ಓದುತ್ತಿದ್ದರು. ಅವರು ಕವಿಯಾಗಿ, ನಾಟಕಕಾರನಗಿಯೂ ಗುರುತಿಸಿಕೊಂಡಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ‘ಚಿನ್ನಾರಿ ಮುತ್ತ’ಗೆ ಇವರೇ ಕಥೆ, ಸಂಭಾಷಣೆ ಹಾಗೂ ಎಲ್ಲಾ ಹಾಡುಗಳನ್ನು ಬರೆದಿದ್ದರು. ‘ಅಮೆರಿಕ ಅಮೆರಿಕ’ ಚಿತ್ರದ ‘ಬಾನಲ್ಲಿ ಓಡೋ ಮೋಡ..’ ಹಾಡು ಇವರ ಬರಹವಾಗಿದೆ. ಪುನೀತ್ ನಟನೆಯ ‘ಮೈತ್ರಿ’ ಚಿತ್ರಕ್ಕೆ ಹಾಡು ಬರೆದಿದ್ದರು. ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ ‘ತೂಗು ಮಂಚದಲ್ಲಿ ಕೂತು..’ ಹಾಡು ಇವರದ್ದು.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ, ಶಾಲೆಗಳಿಗೆ ರಜೆ..! ತುರ್ತು ಸಂದರ್ಭದಲ್ಲಿ ಸಹಾಯವಾಣಿ ಬಳಸುವಂತೆ ಮನವಿ

ಉಳ್ಳಾಲ:ಮನೆ ಮೇಲೆ ತಡೆಗೋಡೆ ಬಿದ್ದು 10ವರ್ಷದ ಬಾಲಕಿ ಸಾವು..! ಫಲಿಸದ ಚಿಕಿತ್ಸೆ

ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳು ಎತ್ತಂಗಡಿ..! ಸರಣಿ ಕೊಲೆಗಳ ಬೆನ್ನಲ್ಲೇ ಮಂಗಳೂರಿಗೆ ನೂತನ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ..!

See also  ಕೊಕ್ಕಡ: ಬೈಕ್ ಗೆ ಜೀಪ್ ಡಿಕ್ಕಿ ಹೊಡೆದು ತಂದೆ-ಮಗಳಿಗೆ ಗಾಯ,ಏನಿದು ಘಟನೆ?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget