ಕ್ರೈಂರಾಜ್ಯ

11 ಬಾರಿ ಚುಚ್ಚಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯನ್ನು ಕೊಂದ ಫಯಾಜ್..! ಲವ್ ಜಿಹಾದ್ ಶಂಕೆ, ತೀವ್ರಗೊಂಡ ತನಿಖೆ

ನ್ಯೂಸ್ ನಾಟೌಟ್ : ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಹತ್ಯೆ ಮಾಡಲಾಗಿದೆ. ಪ್ರೀತಿಯ ವಿಚಾರಕ್ಕೆ ಬೆಳಗಾವಿ ಮೂಲದ ಫಯಾಜ್ ಎಂಬಾತ 11 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದಾನೆ.

ಕೊಲೆಯಾದ ಯುವತಿ ತಂದೆಯನ್ನ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಅರವಿಂದ ಬೆಲ್ಲದ್​​, ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ. ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಗಳ ಸಾವಿಗೆ ನ್ಯಾಯ ಸಿಗಲೇಬೇಕು ಅಂತ ನಿರಂಜನ್ ಹಿರೇಮಠ್ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್​​ನ ಆಡಳಿತದಲ್ಲಿ ಭಯ ಇಲ್ಲದಂತಾಗಿದೆ’ ಅಂತ ಕಿಡಿಕಾರಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಲಹ್ ಜಿಹಾದ್ ಆಗಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಲವ್ ಮಾಡುತ್ತಿದ್ದೇನೆ ಅಂತಾ ಇದ್ದರೂ ಸಹಿತ ಆಮೇಲೆ ಬೇಡ ಅಂದಿರಬಹುದು. ಅದಕ್ಕೆ ಮರ್ಡರ್ ಮಾಡಬೇಕು ಅಂತಾ ಏನಿದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿದೆ ಎಂದರು. ಅಲ್ಲದೇ ಲವ್ ಜಿಹಾದ್​ ಆಯಾಮದಲ್ಲೂ ತನಿಖೆ ಆಗಬೇಕು. ಈ ವಿಚಾರದಲ್ಲೂ ಅತ್ಯಂತ ಗಂಭೀರವಾಗಿ ತನಿಖೆ ಆಗಬೇಕು ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

Related posts

ದರ್ಶನ್ ರಕ್ಷಣೆಗಾಗಿ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಬದಲಾವಣೆಗೆ ಸಚಿವರಿಂದ ಸಿಎಂ ಮೇಲೆ ಒತ್ತಡ..! ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಅಂಗನವಾಡಿಗೆ ನುಗ್ಗಿ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ..! ಅಡುಗೆ ಸಹಾಯಕಿಯ ಗಂಡನಿಂದ ಕೃತ್ಯ..!

ಬಿಜೆಪಿ, ಸಂಘ ಪರಿವಾರ ಕರಾವಳಿಯಂತೆ ಮಂಡ್ಯದಲ್ಲೂ ಪ್ರಯೋಗ ಶಾಲೆ ಆರಂಭಿಸಿದೆ ಎಂದ ಪ್ರಿಯಾಂಕ್ ಖರ್ಗೆ, ಸಚಿವ ಹೇಳಿದ ಆ 4 ಅಂಶಗಳು ಯಾವುವು..?