ಹೈದರಾಬಾದ್ : ಇಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಕುಚ್ಚುಗುಡ್ಡೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಪ್ರಶಾಂತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ. ಪ್ರಶಾಂತ್ ಶೆಟ್ಟಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.