ನ್ಯೂಸ್ ನಾಟೌಟ್: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿನಿಂದ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರವಾಗಲಿದ್ದಾರೆ.
ಇಂದು(ಮೇ.27) ಬಾಡಿ ವಾರಂಟ್ ಮೇಲೆ ಜನಾರ್ದನ ರೆಡ್ಡಿಯನ್ನು ಹೈದರಾಬಾದ್ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ್ ಭಟ್ ಜನಾರ್ದನ ರೆಡ್ಡಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡುವಂತೆ ಆದೇಶ ಪ್ರಕಟಿಸಿ ಮುಂದಿನ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿಕೆ ಮಾಡಿದರು.
ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಖುದ್ದು ಹಾಜರಾತಿಗೆ ಕೋರ್ಟ್ ಸೂಚಿಸಿದ್ದರಿಂದ ರೆಡ್ಡಿ ಅವರನ್ನು ಪೊಲೀಸರು ಕೋರ್ಟ್ಗೆ ಹಾಜರು ಪಡಿಸಿದ್ದರು.
ವಾಟ್ಸ್ ಆ್ಯಪ್ ಚಾಟ್ ಗಳನ್ನು ಸಾಕ್ಷ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದ ಕೋರ್ಟ್..! 12 ಕೊಲೆ ಆರೋಪಿಗಳು ಖುಲಾಸೆ..!
ಬಿಜೆಪಿಯಿಂದ ಇಬ್ಬರು ಶಾಸಕರು 6 ವರ್ಷಗಳ ಕಾಲ ಉಚ್ಚಾಟನೆ..! ನಿರ್ಧಾರವನ್ನು ಸ್ವಾಗತಿಸಿದ ಬಿ.ವೈ. ವಿಜಯೇಂದ್ರ..!