ನ್ಯೂಸ್ ನಾಟೌಟ್ : ನೋಯ್ಡಾ ನಗರದ ಖಾಸಗಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ನನ್ನ ಮೇಲೆ ಹಲ್ಲೆ ನಡೆಸಲಾಯಿತು ಎಂದು ಮಹಾಕುಂಭಮೇಳದಲ್ಲಿ ಜನಪ್ರಿಯತೆ ಗಳಿಸಿದ ‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್ ಆರೋಪಿಸಿದ್ದಾರೆ.
ಕೆಲವರು ಸ್ಟುಡಿಯೋದೊಳಗೆ ಬಂದು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದು, ದೊಣ್ಣೆಯಿಂದ ಹೊಡೆದಿದ್ದಾರೆ ಎಂದು ಆರೋಪಿಸಿ ಅಭಯ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದಾರೆ.
ಹಲ್ಲೆ ಖಂಡಿಸಿ ಅಭಯ್ ಸಿಂಗ್ ನೋಯ್ಡಾದ ಸೆಕ್ಟರ್ 126ರಲ್ಲಿನ ಪೊಲೀಸ್ ಔಟ್ ಪೋಸ್ಟ್ ನ ಹೊರಗೆ ಪ್ರತಿಭಟನೆ ನಡೆಸಿದ್ದರು. ಪೊಲೀಸರ ಮನವೊಲಿಕೆ ಬಳಿಕ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
Media has turned into a joke!
For the sake of TRP, they have stooped to shameless levels.
IIT Baba may have countless flaws, and he might not even have supporters, but why bring him to the studio just to insult him? Have they lost all sense of decency?
pic.twitter.com/uSwpRaL6TU— ADV. ASHUTOSH J. DUBEY 🇮🇳 (@AdvAshutoshBJP) March 1, 2025
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದರು. ಇವರ ನಡುವೆ ಐಐಟಿ ಬಾಂಬೆನಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ಓದಿದ್ದ ಅಭಯ್ ಸಿಂಗ್ ಎನ್ನುವ ಸಾಧುವೊಬ್ಬರು ‘ಐಐಟಿ ಬಾಬಾ’ ಎಂದು ತಮ್ಮನ್ನು ತಾವು ಕರೆದುಕೊಂಡು ನೆಟ್ಟಿಗರ ಗಮನ ಸೆಳೆದಿದ್ದರು.