ನ್ಯೂಸ್ ನಾಟೌಟ್ : 3 ವರ್ಷದಲ್ಲಿ ಬರೋಬ್ಬರಿ 100 ಬೈಕ್ ಕಳ್ಳತನ ಮಾಡಿರುವ ಖತರ್ನಾಕ್ ಕದೀಮನನ್ನು ಕೆ.ಆರ್ ಪುರ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಬಂಗಾರುಪಾಳ್ಯಂ ನಿವಾಸಿ ಪ್ರಸಾದ್ ಬಾಬು ಬಂಧಿತ ಕಳ್ಳ ಎಂದು ಗುರುತಿಸಲಾಗಿದೆ. ದುಬಾರಿ ಬೆಲೆಯ ಬೈಕ್ ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಪ್ರಸಾದ್ ಬಾಬು, ಪ್ರತಿ ದಿನ ಸಂಜೆ ಬಸ್ ನಲ್ಲಿ ಬೆಂಗಳೂರಿಗೆ ಬರುತ್ತಿದ್ದ. ನಂತರ ಕೆಆರ್ ಪುರ, ಟಿನ್ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಟ ನಡೆಸಿ, ಮನೆ ಮುಂದೆ ನಿಲ್ಲಿಸಿದ ಬೈಕ್ ಗಳ ಹ್ಯಾಂಡ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ.
ಬಂದ ದಿನವೇ ಬೈಕ್ ಕದ್ದು, ಅದೇ ಬೈಕ್ ನಲ್ಲಿ ಊರಿಗೆ ಎಸ್ಕೇಪ್ ಆಗುತ್ತಿದ್ದ. ಬೆಂಗಳೂರು, ತಿರುಪತಿ, ಚಿತ್ತೂರು ಸೇರಿ ಹಲವೆಡೆ ಕಳ್ಳತನ ಮಾಡುತ್ತಿದ್ದ. ಪ್ರಸಾದ್ ಬಾಬು ಕದ್ದ ಬೈಕ್ಗಳನ್ನ 15-20 ಸಾವಿರಕ್ಕೆ ಆಂಧ್ರದಲ್ಲಿ ಮಾರಾಟ ಮಾಡಿ, ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯಿಂದ 20 ರಾಯಲ್ ಎನ್ಫೀಲ್ಡ್ ಬೈಕ್, 30 ಫಲ್ಸರ್ ಬೈಕ್, 40 ಆಕ್ಟಿವಾ ಹಾಗೂ ಇತರೆ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸುಮಾರು 1.45 ಕೋಟಿ ರೂ. ಮೌಲ್ಯದ 100 ಬೈಕ್ ವಶಕ್ಕೆ ಪಡೆದ ಕೆಆರ್ ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.