ಕರಾವಳಿಕ್ರೈಂ

ಜ್ಯುವೆಲ್ಲರಿಗೆ ನುಗ್ಗಿ ಸಿಬ್ಬಂದಿಯ ಕೊಲೆ ಕೇಸ್,ಒಂದು ತಿಂಗಳ ಬಳಿಕ ಆರೋಪಿ ಅಂದರ್

294

ನ್ಯೂಸ್ ನಾಟೌಟ್ : ಮಂಗಳೂರಿನ ಮಿಲಾಗ್ರಿಸ್ ಬಳಿ ತಿಂಗಳ ಹಿಂದೆ ಜುವೆಲ್ಲರಿ ಉದ್ಯೋಗಿಯನ್ನು ಹತ್ಯೆ ಮಾಡಿದಾತನನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಫೆ.3ರಂದು ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ಕೇರಳ ಮೂಲದ ಕೊಯಿಲಾಂಡಿಯ ಶಿಫಾಝ್ (33).

ಹಂಪನಕಟ್ಟೆಯ ‘ಮಂಗಳೂರು ಜ್ಯುವೆಲ್ಲರ್ಸ್‌’ನಲ್ಲಿ ಕೆಲಸ ಮಾಡುತ್ತಿದ್ದ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ ಆಚಾರ್ಯ (50) ರನ್ನು ಕೊಲೆ ಮಾಡಲಾಗಿತ್ತು. ಮಧ್ಯಾಹ್ನ 1: 3:44ರ ವೇಳೆಗೆ ರಾಘವೇಂದ್ರ ಆಚಾರ್ಯರು ಬೊಬ್ಬೆ ಹಾಕುವುದು ಕೇಳಿಸಿತ್ತು. ತಕ್ಷಣ ತಾನು ಅಂಗಡಿಯತ್ತ ತೆರಳಿದಾ ಮುಖಕ್ಕೆ ಮಾಸ್ಕ್ ಧರಿಸಿದ ಅಪರಿಚಿತ ವ್ಯಕ್ತಿಯೊಬ್ಬ ಪರಾರಿಯಾಗಿದ್ದ ಎಂದು ಜ್ಯುವೆಲ್ಲರಿಯ ಮಾಲಕ ಕೇಶವ ಆಚಾರ್ಯರು ಬಂದರು ಠಾಣೆಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದರು.

ರಾಘವೇಂದ್ರ ಆಚಾರ್ಯರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರೊಳಗೆ ಅವರು ಕೊನೆಯುಸಿರೆಳೆದಿದ್ದರು. ಕೊಲೆ ಕೃತ್ಯ ನಡೆಯುವುದಕ್ಕಿಂತ 20 ನಿಮಿಷ ಮೊದಲೇ ವ್ಯಕ್ತಿಯು ಜ್ಯುವೆಲ್ಲರಿ ಅಂಗಡಿಗೆ ಆಗಮಿಸಿರುವ ದೃಶ್ಯವು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು. ಆರೋಪಿಯು ಚಿನ್ನಾಭರಣ ಕಳವು ಮಾಡುವುದಕ್ಕಾಗಿ ಅಂಗಡಿಗೆ ನುಗ್ಗಿರಬೇಕು ಎಂದು ಶಂಕಿಸಲಾಗಿತ್ತು. ಜ್ಯುವೆಲ್ಲರಿಯಲ್ಲಿ ಪ್ರದರ್ಶನಕ್ಕಿಡಲಾಗಿದ್ದ ಚಿನ್ನಾಭರಣದಲ್ಲಿ ಕೆಲವು ನಾಪತ್ತೆಯಾಗಿತ್ತು ಎಂದು ಅಂಗಡಿ ಮಾಲಕ ಕೇಶವ ಆಚಾರ್ಯ ದೂರಿನಲ್ಲಿ ತಿಳಿಸಿದ್ದರು.

ಪೊಲೀಸರು ವಿವಿಧ ಆಯಾಮದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದರು. ಅಲ್ಲದೆ ಶಂಕಿತ ಆರೋಪಿಯ ಫೋಟೋವನ್ನು ಬಿಡುಗಡೆಗೊಳಿಸಿದ್ದರು. ಇದೀಗ ಕಾಸರಗೋಡು ಪೊಲೀಸರು ಕೇರಳ ಮೂಲದ ಕೊಯಿಲಾಂಡಿಯ ಶಿಫಾಝ್ (33) ಎಂಬಾತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

See also  Kantara-1: ರಿಷಬ್​ ಪತ್ನಿ ನಟಿಸಲಿದ್ದಾರಾ..? ಈ ಬಗ್ಗೆ ಪ್ರಗತಿ ಶೆಟ್ಟಿ ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget