ಕ್ರೈಂವೈರಲ್ ನ್ಯೂಸ್

ಅಪ್ರಾಪ್ತ ಬಾಲಕಿಯ ಮೇಲೆ ಸ್ವಯಂಘೋಷಿತ ದೇವಮಾನವನಿಂದ ಲೈಂಗಿಕ ದೌರ್ಜನ್ಯ! ಯಾರು ಈ ಸ್ವಯಂಘೋಷಿತ ಸ್ವಾಮಿ?

240

ನ್ಯೂಸ್ ನಾಟೌಟ್: 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಎರಡು ವರ್ಷಗಳಿಂದ ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಪೂರ್ಣಾನಂದ ಸ್ವಾಮಿ ಎಂಬ ಸ್ವಯಂ ಘೋಷಿತ ದೇವಮಾನವನನ್ನು ಸೋಮವಾರ ಸಂಜೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬಂಧಿಸಲಾಗಿದೆ.
ಜ್ಞಾನಾನಂದ ರಮಾನಂದ ಸಾಧುಮಠದ ಆಶ್ರಮದಿಂದ ಅಪ್ರಾಪ್ತ ಬಾಲಕಿ ಓಡಿಹೋಗಿ ವಿಜಯವಾಡದಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಿ, ಎಲ್ಲ ವಿಚಾರಗಳನ್ನು ಹೇಳಿದ್ದಾಳೆ ಎಂದು ವರದಿ ತಿಳಿಸಿದೆ.

ಅಪ್ರಾಪ್ತ ಬಾಲಕಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಬಾಲಕಿಯನ್ನು ಈ ಬಗ್ಗೆ ಮಾತನಾಡಿಸಿದಾಗ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾಳೆ. ತನ್ನನ್ನು ಕಬ್ಬಿಣದ ಸರಪಳಿಯಿಂದ ಕಟ್ಟಿಹಾಕಿ ಹಲವು ದಿನಗಳಿಂದ ಆಶ್ರಮದಲ್ಲಿ ಹಸಿವಿನಿಂದ ಇರುವಂತೆ ಮಾಡಲಾಗಿತ್ತು ಎಂದು ಬಾಲಕಿ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾಳೆ.

ಹುಡುಗಿ ಕಾಣೆಯಾದ ನಂತರ ಪೂರ್ಣಾನಂದ ಸ್ವಾಮಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹುಡುಗಿ ನಾಪತ್ತೆಯಾಗಿದ್ದಾರೆ ಎಂದು ಪೂರ್ಣಾನಂದ ಸ್ವಾಮಿ ಜೂನ್ 15ರಂದು ದೂರು ನೀಡಿದ್ದರು. ಆ ನಂತರ ಬಾಲಕಿ ವಿಜಯವಾಡದಲ್ಲಿ ಇರುವ ಬಗ್ಗೆ ನಮಗೆ ಮಾಹಿತಿ ಬಂದಿದ್ದು, ಅಲ್ಲಿನ ಪೊಲೀಸರು ಮತ್ತು ಸಿಡಬ್ಲ್ಯುಸಿ ಅಧಿಕಾರಿಗಳಿಗೆ ದೂರು ನೀಡಿದ್ದಾಳೆ. ವಿಜಯವಾಡದ ದಿಶಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಪೂರ್ಣಾನಂದ ಸ್ವಾಮಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಮಲ್ಲೇಶ್ವರ ರಾವ್ ಮಾಹಿತಿ ನೀಡಿದ್ದಾರೆ.

 Follow our Social media pages:

FB PAGE : https://www.facebook.com/NewsNotOut2023

YouTube : https://www.youtube.com/@newsnotout8209

Insta : https://www.instagram.com/newsnotout/

Tweet : https://twitter.com/News_Not_Out

Koo App: https://www.kooapp.com/profile/NewsNotOut

See also  ಬಿಗ್ ಬಾಸ್‌ ಮಾಜಿ ಸ್ಪರ್ಧಿ,ಲಾಯರ್​ ಜಗದೀಶ್​ರನ್ನು ಬಂಧಿಸಿದ ಪೊಲೀಸರು!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget