Latestದೇಶ-ವಿದೇಶಬೆಂಗಳೂರುರಾಜ್ಯ

ಯುದ್ಧ ನಡೆದರೆ ಭಾರತೀಯ ಸೈನಿಕರ ಗೆಲುವಿಗಾಗಿ ಸತತ 10 ಗಂಟೆಗಳ ವಿಶೇಷ ಪೂಜೆ..! ಪರಶುರಾಮನ ಬೃಹತ್‌ ಕೊಡಲಿಯಿಟ್ಟು ಯಾಗ..!

889
Pc Cr: Public Tv

ನ್ಯೂಸ್ ನಾಟೌಟ್: ಪಹಲ್ಗಾಮ್‌ ನಲ್ಲಿ ಉಗ್ರರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಯುದ್ಧ ಸಂಭವಿಸಿದ್ರೆ ಭಾರತೀಯ ಸೈನಿಕರಿಗೆ ಯಶಸ್ಸು ಸಿಗಲೆಂದು ಶ್ರೀರಾಮ ಸೇನೆ ಸಂಘಟನೆ ವತಿಯಿಂದ ಇಂದು(ಎ.29) ಬೆಂಗಳೂರು ನಗರದಲ್ಲಿ ಮಹಾಯಾಗ ನಡೆಸಲಾಯಿತು.

ಬೆಂಗಳೂರಿನ ರಾಜಾಜಿನಗರ ರಾಮಮಂದಿರದ ಬಿಬಿಎಂಪಿ ಮೈದಾನದಲ್ಲಿ ಪರಶುರಾಮನ ಬೃಹತ್‌ ಕೊಡಲಿಯಿಟ್ಟು ರಾಮ ಭದ್ರಕಯಾಗ, ಸಂಕಲ್ಪಯಾಗ, ಪರಶುರಾಮ ಯಾಗ ನೆರವೇರಿಸಲಾಯಿತು. ಒಂದು ವೇಳೆ ಯುದ್ಧ ಸಂಭವಿಸಿದ್ರೆ ಪಾಕಿಸ್ತಾನ ಉಗ್ರರ ಹುಟ್ಟಡಗಿಸಬೇಕೆಂದು ಹಾರೈಸಿ, ಭಾರತೀಯ ಯೋಧರಿಗೆ ಆತ್ಮಸ್ಥೈರ್ಯ, ಶಕ್ತಿ ತುಂಬಲು ಸಂಕಲ್ಪ ಮಾಡಿ ಸತತ 10 ಗಂಟೆ ವಿಶೇಷ ಪೂಜೆ ನೆರವೇರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಹಿಂದೂ ಮುಖಂಡರಾದ ಗಂಗಾಧರ್ ಕುಲಕರ್ಣಿ ಸೇರಿದಂತೆ ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು.

ವಿಶೇಷ ಹೋಮ, ಹವನದ ಬಳಿಕ ಬೃಹತ್‌ ಗಾತ್ರದ ಪರಶುರಾಮನ 15 ಅಡಿಯ ಮೂರ್ತಿಯೊಂದಿಗೆ ಕೊಡಲಿ ಹಿಡಿದು ಶ್ರೀ ರಾಮಸೇನೆಯಿಂದ ಶೋಭಯಾತ್ರೆ ನಡೆಸಲಾಯಿತು.

ಕೊಡಗು: ಪೊಲೀಸ್ ಶ್ವಾನ ಪೃಥ್ವಿಗೆ ಹೃದಯಾಘಾತ..! 500ಕ್ಕೂ ಹೆಚ್ಚು ವಿಐಪಿ, ವಿವಿಐಪಿ ಸುರಕ್ಷತಾ ಕರ್ತವ್ಯಗಳಲ್ಲಿ ಭಾಗಿಯಾಗಿದ್ದ ಶ್ವಾನ ಇನ್ನಿಲ್ಲ..!

See also  ಕುಂಭ ಮೇಳದಲ್ಲಿ ಸ್ನಾನ ಮಾಡಿದ ಮಹಿಳೆಯರಿಗೆ ಢವ ಢವ!! ಮಹಿಳೆಯರ ಸ್ನಾನದ ವಿಡಿಯೋಗಳು ಸೇಲ್​!!ಸೋಶಿಯಲ್ ಮೀಡಿಯಾದಲ್ಲಿ ವೈರಲ್!ಕುಂಭಮೇಳಕ್ಕೆ ಕೆಟ್ಟ ಹೆಸರು ತರಲು ಮತ್ತೊಂದು ಪ್ರಯತ್ನವೇ?
  Ad Widget   Ad Widget   Ad Widget   Ad Widget   Ad Widget