ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಭಾರತದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲ ಸಂಸದನ ಕೇಸ್ ಗೆ ಬಿಗ್ ಟ್ವಿಸ್ಟ್..! ಕತ್ತು ಹಿಸುಕಿ, ಚರ್ಮ ಸುಲಿದ ಸ್ಥಿತಿಯಲ್ಲಿ ಶವ ಪತ್ತೆ..!

ನ್ಯೂಸ್ ನಾಟೌಟ್: ಮೇ.13 ರಂದು ಭಾರತದ ಕೋಲ್ಕತ್ತಾದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನಾರ್ ಹತ್ಯೆಗೀಡಾಗಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶ ಗೃಹ ಸಚಿವ ಅಸಾದುಝಮಾನ್ ಖಾನ್ ತಿಳಿಸಿದ್ದಾರೆ. ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳಿಗೆ ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಂಸದರನ್ನು ಕತ್ತು ಹಿಸುಕಿ, ಚರ್ಮ ಸುಲಿದು ಕತ್ತರಿಸಿ ಹಾಕಲಾಗಿದೆ ಎಂದು ವರದಿ ತಿಳಿಸಿವೆ.

ಈ ಸಂಬಂಧ ಮುಂಬೈನಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗ ಜಿಹಾದ್ ಹವಾಲ್ದಾರ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಈತ ಸಂಸದರ ಭೀಕರ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಸಿಐಡಿ ಮೂಲಗಳ ಪ್ರಕಾರ, ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಫ್ಲಾಟ್‌ನಲ್ಲಿ ಕೊಲೆ ಮತ್ತು ಸಂಸದರ ದೇಹವನ್ನು ತುಂಡು ತುಂಡಾಗಿಸಿ ವಿಕೃತಿ ಮೆರೆದಿರುವ ಬಗ್ಗೆ ಜಿಹಾದ್ ಹವಾಲ್ದಾರ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಜೊತೆಗೆ ಈ ಹೇಯ ಕೃತ್ಯದ ಹಿಂದಿನ ಮಾಸ್ಟರ್ ಮೈಂಡ್ ಬಾಂಗ್ಲಾದೇಶ ಮೂಲದ ಯುಎಸ್ ಪ್ರಜೆ ಅಖ್ತರುಝಾಮಾನ್ ಎಂದು ಹವಾಲ್ದಾರ್ ಬಾಯ್ಬಿಟ್ಟಿದ್ದಾನೆ. ಅಖ್ತರುಜ್ಜಮಾನ್ ಆದೇಶದ ಮೇರೆಗೆ, ಹವಾಲ್ದಾರ್ ಇತರ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳೊಂದಿಗೆ ಸೇರಿ ನ್ಯೂಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಸಂಸದರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಹವಾಲ್ದಾರ್ ವಿವರಿಸಿದ್ದಾನೆ. ಆತನನ್ನು ಇಂದು(ಮೇ.೨೪) ಬರಾಸತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ತಿಳಿಸಿದ್ದಾರೆ.

Click 👇

https://newsnotout.com/2024/05/baby-re-birth-issue-and-darga-story
https://newsnotout.com/2024/05/rameshwaram-cafe-case-food-department-raid
https://newsnotout.com/2024/05/banshankari-devi-latters-from-devotees

Related posts

ದೊಡ್ಡಡ್ಕ ಶ್ರೀ ಕೊರಗಜ್ಜ ದೈವ ಸನ್ನಿಧಿಗೆ ಸರಿಗಮಪ ಖ್ಯಾತಿಯ ಗಾಯಕನ ಭೇಟಿ, ಭಜನೆ ಹಾಡಿ ಅಜ್ಜನ ಮೇಲಿನ ಭಕ್ತಿ ತೋರಿದ ಪೊಲೀಸ್..!

ರಷ್ಯಾದಲ್ಲಿ ಕ್ರೈಸ್ತ, ಯಹೂದಿ ಪ್ರಾರ್ಥನಾ ಮಂದಿರಗಳ ಮೇಲೆ ಉಗ್ರರ ಭೀಕರ ದಾಳಿ..! 16 ಜನರನ್ನು ಕೊಂದಿದ್ದ 6 ಉಗ್ರರನ್ನು ಹತ್ಯೆ ಮಾಡಿದ ರಷ್ಯಾ..!

ವಾರಾಣಾಸಿಯಲ್ಲಿ ಪ್ರಧಾನಿ ಮೋದಿಗೆ 3ನೇ ಭಾರಿಯ ಗೆಲುವು, 6,12,970 ಮತ ಪಡೆದ ಮೋದಿ