ನ್ಯೂಸ್ ನಾಟೌಟ್: ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು ನಾಲ್ಕು 4 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದ ಖುಷಿಗೆ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಅದೇ ರೀತಿ ಹೈದರಾಬಾದ್ ಕ್ರಿಕೆಟ್ ಅಭಿಮಾನಿಗಳು ರಸ್ತೆಗಿಳಿದು ಗೆಲುವನ್ನು ಸಂಭ್ರಮಿಸಿದ್ದು, ಸಂಭ್ರಮಾಚರಣೆಯಲ್ಲಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಈ ಘಟನೆ ಹೈದರಾಬಾದ್ ನ ದಿಲ್ ಸುಖ್ ನಗರದಲ್ಲಿ ನಡೆದಿದ್ದು, ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದ ಖುಷಿಯಲ್ಲಿ ರಸ್ತೆಗಿಳಿದು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.
బ్రేకింగ్ న్యూస్
ఛాంపియన్స్ ట్రోఫీ ఫైనల్ లో భారత్ విజయం
హైదరాబాద్లో సంబరాలు చేసుకున్న ఫ్యాన్స్ను చితకబాదిన పోలీసుల
ఛాంపియన్స్ ట్రోఫీ ఫైనల్లో భారత జట్టు గెలవడంతో హైదరాబాద్లో దిల్సుఖ్ నగర్లో రోడ్లపైకి వచ్చి సంబరాలు చేసుకున్న ఫ్యాన్స్ మీద లాఠీ ఛార్జ్ చేసిన పోలీసులు pic.twitter.com/UBabGMdvkG
— Telugu Scribe (@TeluguScribe) March 9, 2025
ವರದಿಗಳ ಪ್ರಕಾರ ಅಭಿಮಾನಿಗಳು ರಸ್ತೆಗಿಳಿದು ಪಟಾಕಿ ಸಿಡಿಸಿ, ಡ್ಯಾನ್ಸ್ ಮಾಡುವ ಮೂಲಕ ಟೀಂ ಇಂಡಿಯಾದ ಗೆಲುವನ್ನು ಸಂಭ್ರಮಿಸಿದ್ದು, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕಾರಣ ಸಂಚಾರ ದಟ್ಟಣೆ ಉಂಟಾಗಿದೆ. ಈ ಸಂದರ್ಭದಲ್ಲಿ ಇದನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ರಸ್ತೆಗಿಳಿದ ಅಭಿಮಾನಿಗಳ ಮೇಲೆ ಹೈದರಾಬಾದ್ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.