ನ್ಯೂಸ್ ನಾಟೌಟ್: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಬಲೂಚ್ ಬರಹಗಾರ ಮೀರ್ ಯಾರ್ ಬಲೂಚ್ ಪಾಕಿಸ್ತಾನದಿಂದ ಬಲೂಚಿಸ್ತಾನದ ಸ್ವಾತಂತ್ರ್ಯವನ್ನು ಪ್ರತಿಪಾದಿಸಿದ್ದಾರೆ. ನವದೆಹಲಿಯಲ್ಲಿ ಬಲೂಚ್ ರಾಯಭಾರ ಕಚೇರಿಯನ್ನು ತೆರೆಯಲು ಅವಕಾಶ ನೀಡಬೇಕೆಂದು ಭಾರತ ಸರ್ಕಾರವನ್ನು ಕೋರಿದ್ದಾರೆ. ಬಲೂಚ್ ಜನರ ಪರವಾಗಿ ವಕಾಲತ್ತು ವಹಿಸುವವರಿಗೆ ಹೆಸರುವಾಸಿಯಾದ ಮಿರ್ ಯಾರ್ ಬಲೂಚ್, ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಪೋಸ್ಟ್ ಗಳಲ್ಲಿ ಈ ಘೋಷಣೆ ಮಾಡಿದ್ದಾರೆ. ಬಲೂಚಿಸ್ತಾನಕ್ಕೆ ಶಾಂತಿಪಾಲನಾ ಪಡೆಗಳನ್ನು ಕಳುಹಿಸುವಂತೆ ವಿಶ್ವಸಂಸ್ಥೆಯನ್ನು ವಿನಂತಿಸಿದ್ದು ಪಾಕಿಸ್ತಾನಿ ಸೈನ್ಯವು ಆ ಪ್ರದೇಶವನ್ನು ತೊರೆಯಬೇಕೆಂದು ಒತ್ತಾಯಿಸಿದರು.
ಭಾರತ ಮತ್ತು ಪಾಕಿಸ್ತಾನ ನಡುವಿನ ಗಂಭೀರ ಸಂಘರ್ಷದ ಮಧ್ಯೆ ಮಿರ್ ಯಾರ್ ಅವರ ಈ ಹೇಳಿಕೆ ಬಂದಿದೆ. ಮೇ 7ರಂದು, ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡಿತು. ಯಾವುದೇ ಪಾಕಿಸ್ತಾನಿ ಮಿಲಿಟರಿ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಲಾಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನ ಗುರುವಾರ ನಾಗರಿಕ ಮತ್ತು ಮಿಲಿಟರಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಡ್ರೋನ್ಗಳು, ಕ್ಷಿಪಣಿಗಳು ಮತ್ತು ಫಿರಂಗಿ ಶೆಲ್ ದಾಳಿ ನಡೆಸುವ ಮೂಲಕ ಉದ್ವಿಗ್ನ ಪರಿಸ್ಥಿತಿಯನ್ನು ಹೆಚ್ಚಿಸಿತು.
ಭಾರತವು ಡ್ರೋನ್ ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸುವ ಮೂಲಕ ಪ್ರತಿಕ್ರಿಯಿಸಿತು. ಇದು ಪಾಕಿಸ್ತಾನಿ ಯುದ್ಧ ವಿಮಾನಗಳು ಮತ್ತು ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ (AWACS) ವಿಮಾನವನ್ನು ಸಹ ನಾಶಪಡಿಸಿತು. 100ಕ್ಕೂ ಹೆಚ್ಚು ಅನಿಲ ಬಾವಿಗಳಿರುವ ಡೇರಾ ಬುಗ್ತಿಯಲ್ಲಿರುವ ಪಾಕಿಸ್ತಾನದ ಅನಿಲ ನಿಕ್ಷೇಪಗಳ ಮೇಲೆ ಬಲೂಚ್ ಸ್ವಾತಂತ್ರ್ಯ ಹೋರಾಟಗಾರರು ದಾಳಿ ಮಾಡಿದ್ದರು ಎಂದು ಮಿರ್ ಯಾರ್ ಬಲೂಚ್ ಹೇಳಿಕೊಂಡಿದ್ದಾರೆ. ಉಗ್ರ ಪೋಷಿತ ಪಾಕಿಸ್ತಾನದ ಪತನ ಹತ್ತಿರವಾಗುತ್ತಿದ್ದಂತೆ ಶೀಘ್ರದಲ್ಲೇ ಘೋಷಣೆ ಹೊರಡುವ ಸಾಧ್ಯತೆಯಿದೆ. ನಾವು ನಮ್ಮ ಸ್ವಾತಂತ್ರ್ಯವನ್ನು ಪ್ರತಿಪಾದಿಸಿದ್ದೇವೆ ಮತ್ತು ದೆಹಲಿಯಲ್ಲಿ ಬಲೂಚಿಸ್ತಾನದ ಅಧಿಕೃತ ಕಚೇರಿ ಮತ್ತು ರಾಯಭಾರ ಕಚೇರಿಯನ್ನು ಅನುಮತಿಸುವಂತೆ ಭಾರತವನ್ನು ವಿನಂತಿಸುತ್ತೇವೆ ಎಂದು ತಮ್ಮ ಒಂದು ಪೋಸ್ಟ್ನಲ್ಲಿ ಬರೆದಿದ್ದಾರೆ.
ಅಂತರರಾಷ್ಟ್ರೀಯ ಬೆಂಬಲವನ್ನು ಕೋರಿ ಅವರು, “ಬಲೂಚಿಸ್ತಾನ್ ಪ್ರಜಾಸತ್ತಾತ್ಮಕ ಗಣರಾಜ್ಯದ ಸ್ವಾತಂತ್ರ್ಯವನ್ನು ಗುರುತಿಸಲು ಮತ್ತು ಮಾನ್ಯತೆಯನ್ನು ಬೆಂಬಲಿಸಲು ಎಲ್ಲಾ UN ಸದಸ್ಯ ರಾಷ್ಟ್ರಗಳ ಸಭೆಯನ್ನು ಕರೆಯಲು ನಾವು ವಿಶ್ವಸಂಸ್ಥೆಯನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.
ಪಾಕಿಸ್ತಾನಕ್ಕೆ 19 ಸಾವಿರ ಕೋಟಿ ರೂಪಾಯಿ ಸಾಲ ಕೊಟ್ಟ IMF..! ಭಾರತದ ವಿರೋಧದ ನಡುವೆಯೂ ಸಾಲ ಮಂಜೂರು..!