ಕ್ರೈಂದೇಶ-ವಿದೇಶವೈರಲ್ ನ್ಯೂಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಉಗ್ರರ ಎನ್ ​ಕೌಂಟರ್..! ಮೇ 20ರಂದು ಚುನಾವಣೆ ಹಿನ್ನೆಲೆ ಕಾರ್ಯಾಚರಣೆ ಚುರುಕು..!

166

ನ್ಯೂಸ್ ನಾಟೌಟ್: ಭಾರತೀಯ ಸೇನೆ ಗುರುವಾರ(ಮೇ.16) ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ನಂತರ ಇಬ್ಬರು ಭಯೋತ್ಪಾದಕರನ್ನು ಎನ್ ಕೌಂಟರ್ ​​ನಲ್ಲಿ (Encounter) ಹತ್ಯೆ ಮಾಡಲಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ (Kupwara) ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದಿದೆ.

ತಂಗ್‌ಧರ್ ಸೆಕ್ಟರ್‌ನ ಬೇಲಿಯ ಇನ್ನೊಂದು ಬದಿಯಲ್ಲಿ ಶವಗಳು ಬಿದ್ದಿರುವುದು ಸೇನೆ ಖಚಿತ ಪಡಿಸಿದೆ. ಮೇ 20ರಂದು ಚುನಾವಣೆ ನಡೆಯಲಿರುವ ಕುಪ್ವಾರದ ಈ ಪ್ರದೇಶವು ಬಾರಾಮುಲ್ಲಾ ಸಂಸದೀಯ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಶ್ರೀನಗರದಲ್ಲಿ ದಾಖಲೆ ಮಟ್ಟದ ಮತದಾನದ ನಂತರ, ಬಾರಾಮುಲ್ಲಾ ಮತ್ತು ಉತ್ತರ ಕಾಶ್ಮೀರದಲ್ಲಿ ಹೆಚ್ಚಿನ ಮತದಾನದ ಪ್ರಮಾಣವು ಕಂಡುಬರಬಹುದು ಎಂದು ನಿರೀಕ್ಷಿಸಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಇನ್ನೊಂದು ಬದಿಯಲ್ಲಿ ಒಳನುಸುಳುತ್ತಿರುವ ಉಗ್ರರ 4 ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಹೆಚ್ಚಿನ ಭಯೋತ್ಪಾದಕರ ಪತ್ತೆಗಾಗಿ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

Click 👇

https://newsnotout.com/2024/05/viral-video-and-instagram-live-car-collision
https://newsnotout.com/2024/05/husband-and-wife-gym-trainer-issue
https://newsnotout.com/2024/05/narendra-modi-and-comedian-in-varanasi
See also  ಉಡುಪಿಯ ತ್ರಾಸಿ ಬೀಚ್‌ ನಲ್ಲಿ ಟೂರಿಸ್ಟ್ ಬೋಟ್ ಪಲ್ಟಿ ..! ಪ್ರವಾಸಿಗ ಪಾರು, ಬೋಟ್ ರೈಡರ್ ಕಣ್ಮರೆ..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget