ಕರಾವಳಿಮಂಗಳೂರುರಾಜಕೀಯ

ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಕಾರಣ, ಮಂಗಳೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

228

ನ್ಯೂಸ್ ನಾಟೌಟ್: ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ ಬಾರಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ಡಿಜಿಟಲ್‌ ಮೂಲಸೌಕರ್ಯ, ವಿತ್ತೀಯ ಸೇರ್ಪಡೆ ಹಾಗೂ ಯುವಜನರ ಕೌಶಲ ಸುಧಾರಣೆಗೆ ಆದ್ಯತೆ ನೀಡುವ ಖಚಿತ ನಿರ್ದೇಶನಗಳನ್ನು ಹೊಂದಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಬುಧವಾರ ಸಿಟಿಜನ್ ಕೌನ್ಸಿಲ್‌ ವತಿಯಿಂದ ಹಮ್ಮಿಕೊಳ್ಳಲಾದ ಅನೌಪಚಾರಿಕ ಸಂವಾದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಭಾರತ 2014ರಲ್ಲಿ 10ನೇ ಸ್ಥಾನದಲ್ಲಿತ್ತು, ಈಗ ನಿರಂತರ ಬೆಳವಣಿಗೆ ಕಂಡು 5ನೇ ಸ್ಥಾನಕ್ಕೆ ಏರಿದೆ. ಆದರೆ ಇದರಲ್ಲಿ ಯಾವುದೆ ವಿಶೇಷ ಇಲ್ಲ, ಇದು ಸಹಜವಾಗಿ ಆಗುವ ಪ್ರಕ್ರಿಯೆ. ಇದರಲ್ಲಿ ನಾಯಕತ್ವದ ಯಾವುದೇ ಪಾತ್ರ ಇಲ್ಲ ಎನ್ನುವಂತಹ ವ್ಯಾಖ್ಯಾನಗಳನ್ನು ಕೆಲವರು ನೀಡುತ್ತಿದ್ದಾರೆ. ಆದರೆ ಸವಾಲುಗಳನ್ನು ಎದುರಿಸುವಾಗ, ತೆರಿಗೆ ನೀತಿ ರೂಪಿಸುವಾಗ, ಕೃಷಿ, ಕೈಗಾರಿಕೆ, ಎಂಎಸ್‌ಎಂಇ ಕ್ಷೇತ್ರದ ನೀತಿಗಳನ್ನು ರೂಪಿಸುವುದು ಕೂಡ ಅದರದ್ದೇ ಆದ ಪ್ರಭಾವ ಬೀರುತ್ತದೆ. ಕೋವಿಡ್ ವೇಳೆ ಆಡಳಿತದಲ್ಲಿದ್ದ ಐವತ್ತಕ್ಕೂ ದೇಶಗಳಲ್ಲಿ ಸರಕಾರಗಳು ಅಧಿಕಾರ ಕಳೆದುಕೊಂಡಿವೆ. ಆದರೆ ಮೋದಿಯವರ ಭ್ರಷ್ಟಾಚಾರ ರಹಿತ ಆಡಳಿತದ ವೈಖರಿ ಹಾಗೂ ಜನರಿಗೆ ಅವರ ಮೇಲಿನ ವಿಶ್ವಾಸದಿಂದಾಗಿ ಮತ್ತೆ ಅಧಿಕಾರಕ್ಕೆ ಬಂದಿದೆ’ ಎಂದರು.

ಈ ಬಾರಿಯ ಬಜೆಟ್ ನಲ್ಲಿ ಯುವ ಜನರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಉದ್ಯೋಗಾರ್ಹತೆ ಹೆಚ್ಚಿಸಲು 21-24 ವರ್ಷದೊಳಗಿನ ನಿರುದ್ಯೋಗಿ ಯುವಕರಿಗೆ ಕೌಶಲ ನೀಡಲು 500 ಟಾಪ್‌ ಕಂಪೆನಿಗಳ ಸಹಯೋಗದಲ್ಲಿ ಇಂಟರ್ನ್ಶಿಪ್‌ ಕಾರ್ಯಕ್ರಮವನ್ನು ಯೋಜಿಸಿದ್ದೇವೆ. ಅದೇ ರೀತಿ ಐಟಿಐ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ತರಬೇತಿ ನೀಡಲು ಐಟಿಐಗಳಿಗೆ ಅತ್ಯಾಧುನಿಕ ಯಂತ್ರೋಪಕರಣ ಒದಗಿಸಲಾಗುವುದು ಎಂದು ಹೇಳಿದರು. ಸಿಟಿಝನ್‌ ಕೌನ್ಸಿಲ್‌ ಅಧ್ಯಕ್ಷ ವಾಸುದೇವ ಕಾಮತ್‌ ಇದ್ದರು.

See also  'ಸಿದ್ದರಾಮಯ್ಯರನ್ನು ಮುಗಿಸಲು ಡಿಕೆ ಶಿವಕುಮಾರ್‌ ಪ್ಲಾನ್‌..! ನಂಗೆ ಎಲ್ಲಾ ಗೊತ್ತಿದೆ' ಎಂದ ಯತ್ನಾಳ್‌
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget