ನ್ಯೂಸ್ ನಾಟೌಟ್: ಪಹಲ್ಗಾಮ್ ದಾಳಿಯ ಬಳಿಕ ಭಾರತೀಯ ಸೇನೆಯು ಭಯೋತ್ಪಾದಕರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯು ಮುಂದುವರಿದಿದೆ. ಇಂದು(ಮೇ.13) ದಕ್ಷಿಣ ಕಾಶ್ಮೀರದ ಶೋಪಿಯಾನದ ಕೆಲ್ಲರ್ ಅರಣ್ಯದಲ್ಲಿ ತೀವ್ರ ಕಾರ್ಯಾಚರಣೆ ನಡೆಸಿ ಮೂವರು ಭಯೋತ್ಪಾದಕರನ್ನು ಹೊಡೆದು ಹಾಕಿದೆ.
ಇವತ್ತಿನ ಕಾರ್ಯಾಚರಣೆಯನ್ನು ಸೇನೆಯು ‘Operation Keller’ ಎಂದು ಕರೆದಿದೆ. ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆ ಖಚಿತ ಮಾಹಿತಿ ನೀಡಿತ್ತು. ಈ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಕೂಂಬಿಂಗ್ ನಡೆಸಿತ್ತು. ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯನ್ನು ಆಪರೇಷನ್ ಕೆಲ್ಲರ್ ಎಂದು ಕರೆಯಲಾಗಿದೆ. ಉಗ್ರರ ವಿರುದ್ಧ ನಡೆದ ದಾಳಿಯಲ್ಲಿ ಮೂವರನ್ನು ಹೊಡೆದು ಹಾಕಲಾಗಿದೆ ಎಂದು ಸೇನೆ ಹೇಳಿಕೊಂಡಿದೆ.
ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಉಗ್ರರನ್ನು ಸೇನೆ ಹೊಡೆದು ಹಾಕಿದೆ. ಈ ಕಾರ್ಯಾಚರಣೆಯಲ್ಲಿ ಸೆಕ್ಯೂರಿಟಿ ಫೋರ್ಸ್, ಆರ್ಮಿ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು. ಉಗ್ರರ ಕ್ಯಾಂಪ್ ಗಳನ್ನು ಧ್ವಂಸ ಮಾಡಲಾಗಿದೆ. ಜೊತೆಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೀಜ್ ಮಾಡಲಾಗಿದೆ. ಹತರಾದವರು ಪಾಕಿಸ್ತಾನಿ ಮೂಲದ ಉಗ್ರರ ಎಂದು ವರದಿಯಾಗಿದೆ.
ಹಲವು ಮಹಿಳೆಯರ ಖಾಸಗಿ ವಿಡಿಯೋ ಮಾಡಿ ಸುಲಿಗೆ..! 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್..! ಗೋಡೆ ಒಡೆದು 9 ಮಂದಿಯ ರಕ್ಷಣೆ..!