Latestಕ್ರೈಂದೇಶ-ವಿದೇಶರಾಜಕೀಯರಾಜ್ಯವೈರಲ್ ನ್ಯೂಸ್

ಯುದ್ಧ ಪೀಡಿತ ಇರಾನ್‌ ನಿಂದ 110 ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್, ತಡರಾತ್ರಿ ದೆಹಲಿಗೆ ಬಂದಿಳಿದ ವಿಮಾನ

318

ನ್ಯೂಸ್ ನಾಟೌಟ್: ಯುದ್ಧಪೀಡಿತ ಇರಾನ್‌ ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟ 110 ಭಾರತೀಯ ವಿದ್ಯಾರ್ಥಿಗಳನ್ನು ಮೊದಲ ವಿಮಾನ ಬುಧವಾರ ತಡರಾತ್ರಿ ನವದೆಹಲಿಗೆ ಬಂದಿಳಿದಿದೆ.
ಈ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ‘ಆಪರೇಷನ್ ಸಿಂಧು’ ಎಂದು ಹೆಸರಿಟ್ಟಿದ್ದು, ಕಾರ್ಯಾಚರಣೆ ಮೂಲಕ ಭಾರತೀಯರನ್ನು ಸ್ಥಳಾಂತರಿಸಲಾಗುತ್ತಿದೆ.

ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ನಡುವೆ ಇರಾನ್ ರಾಜಧಾನಿ ಟೆಹ್ರಾನ್‌ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಮೊದಲು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು.

ಈ ಪೈಕಿ 110 ಮಂದಿ ಇರಾನ್ ಗಡಿ ದಾಟಿ ನೆರೆಯ ಅರ್ಮೇನಿಯಾ ದೇಶಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳನ್ನು ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ನೆರವಿನೊಂದಿಗೆ ಸ್ವದೇಶಕ್ಕೆ ಕರೆಲಾಗಿದೆ.

ಇರಾನ್‌ ನಲ್ಲಿರುವ ಭಾರತೀಯರು ಟೆಹ್ರಾನ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ತುರ್ತು ಸಹಾಯವಾಣಿ ಸಂಪರ್ಕಿಸುವಂತೆ ಕೋರಿದೆ. ದೂರವಾಣಿ ಸಂಖ್ಯೆ: +989010144557, +989128109115; +989128109109.

ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ, ಶಾಲಾ ಶಿಕ್ಷಣ ಇಲಾಖೆ ಆದೇಶ

See also  ಐಸಿಸ್ ಮಾದರಿಯಲ್ಲಿ ನೇಹಾ ಕುತ್ತಿಗೆಗೆ ಚಾಕು ಹಾಕಿ ಕೊಲೆ, ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತ್ತಾಲಿಕ್ ಗಂಭೀರ ಆರೋಪ
  Ad Widget   Ad Widget   Ad Widget   Ad Widget   Ad Widget   Ad Widget   Ad Widget