Latestಕ್ರೈಂದೇಶ-ವಿದೇಶರಾಜಕೀಯ

ಇರಾನ್‌ ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ದೆಹಲಿಗೆ ಬಂದ ನಂತ್ರ ಕಳಪೆ ಬಸ್ಸು ನೀಡಿದ್ದಾರೆ ಎಂದು ಆಕ್ರೋಶ..! ಇಲ್ಲಿದೆ ವಿಡಿಯೋ

702

ನ್ಯೂಸ್ ನಾಟೌಟ್: ಇರಾನ್‌ ನಲ್ಲಿ ಸಿಲುಕಿದ್ದ ಕಾಶ್ಮೀರದ ವಿದ್ಯಾರ್ಥಿಗಳು ದೆಹಲಿಯಲ್ಲಿ ಇಳಿದ ಬೆನ್ನಲ್ಲೇ ಜಮ್ಮು ಕಾಶ್ಮೀರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇರಾನ್‌ ನ ಉರ್ಮಿಯಾ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ 110 ವಿದ್ಯಾರ್ಥಿಗಳು ಆಪರೇಷನ್ ಸಿಂಧು ಕಾರ್ಯಾಚರಣೆಯ ಮೂಲಕ ಗುರುವಾರ(ಜೂ.19) ಬೆಳಿಗ್ಗೆ ದೆಹಲಿಗೆ ಬಂದಿಳಿದರು.

ದೆಹಲಿಗೆ ಆಗಮಿಸಿದ ವಿದ್ಯಾರ್ಥಿಗಳನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್‌ ಸಿಂಗ್‌ ಆತ್ಮೀಯವಾಗಿ ಬರಮಾಡಿಕೊಂಡರು. ಸಂಘರ್ಷ ಪೀಡಿತ ಇರಾನ್‌ ನಿಂದ ಸುರಕ್ಷಿತವಾಗಿ ಭಾರತಕ್ಕೆ ಕರೆ ತಂದಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳು ಧನ್ಯವಾದ ಅರ್ಪಿಸಿದರು.

ಈಗ ಈ ವಿದ್ಯಾರ್ಥಿಗಳು ಕಳಪೆ ಬಸ್ಸುಗಳನ್ನು ನೀಡಿದ್ದಕ್ಕೆ ಜಮ್ಮು ಕಾಶ್ಮೀರ ಸರ್ಕಾರವನ್ನು ದೂರಿದ್ದಾರೆ. ನಾವು ಬಹಳ ದೂರದಿಂದ ಬಂದಿದ್ದೇವೆ. ಆದರೆ ಸರ್ಕಾರ ಡಿಲಕ್ಸ್‌ ಬಸ್ಸು ನೀಡದೇ ಕಳಪೆ ಬಸ್ಸು ನೀಡಿದೆ. ವಿಮಾನ ವ್ಯವಸ್ಥೆಯನ್ನು ಸಹ ಮಾಡಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ನಾಲ್ಕು ದಿನದಿಂದ ಪ್ರಯಾಣ ಮಾಡಿ ಸಾಕಷ್ಟು ಸುಸ್ತಾಗಿದ್ದೇವೆ. ಈಗ ಎಸ್‌ ಆರ್‌ ಟಿಸಿ ಬಸ್ ನಲ್ಲಿ ಹೋಗಿ ಅಂದರೆ ಹೇಗೆ? ಅಷ್ಟೇ ಅಲ್ಲದೇ ಇಲ್ಲಿ ಜಮ್ಮು ಕಾಶ್ಮೀರ ಸರ್ಕಾರದ ಯಾವೊಬ್ಬ ಅಧಿಕಾರಿಯನ್ನು ಸಹ ನಿಯೋಜನೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇಸ್ರೇಲ್‌ ಜೊತೆಗಿನ ಸಂಘರ್ಷದ ಕಾರಣದಿಂದ ಇರಾನ್‌ ತನ್ನ ವಾಯುನೆಲೆಯನ್ನು ಬಂದ್‌ ಮಾಡಿದೆ. ಹೀಗಾಗಿ ಭಾರತದ ವಿದ್ಯಾರ್ಥಿಗಳು ಇರಾನ್‌ನಿಂದ ಅರ್ಮೇನಿಯಾ ಮತ್ತು ದೋಹಾ ಪ್ರವೇಶಿಸಿ ಇಂಡಿಗೋ ವಿಶೇಷ ವಿಮಾನದ ಮೂಲಕ ದೆಹಲಿಗೆ ಬಂದಿದ್ದಾರೆ.

ಯುದ್ಧ ನಿಲ್ಲಿಸಲು ನಿರ್ಧರಿಸಿದ್ದು ಭಾರತ ಮತ್ತು ಪಾಕಿಸ್ತಾನದ ಬುದ್ಧಿವಂತ ನಾಯಕರು ಎಂದ ಟ್ರಂಪ್..! ಇಷ್ಟು ದಿನ ಯುದ್ಧ ತಾನು ನಿಲ್ಲಿಸಿದೆ ಎನ್ನುತ್ತಿದ್ದ ಟ್ರಂಪ್ ಯೂಟರ್ನ್..!

ಉಪ್ಪಿನಂಗಡಿ: ಕುಮಾರಧಾರಾ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷ..! ಆತಂಕದಲ್ಲಿ ಸ್ಥಳೀಯರು..!

See also  ಕೆಂಡ ಹಾಯುವಾಗ ಮುಗ್ಗರಿಸಿ ಬಿದ್ದ ವೀರಗಾಸೆಯ ಪೂಜಾರಿ..! ಮುಂದೇನಾಯ್ತು..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget