Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಇಸ್ರೇಲ್‌ – ಇರಾನ್‌ ಸಂಘರ್ಷದಿಂದ ಭಾರತದ ಅಕ್ಕಿ ರಫ್ತಿನ ಮೇಲೆ ಭಾರೀ ಹೊಡೆತ..! ಭಾರತದ ಬಂದರುಗಳಲ್ಲೇ ಉಳಿದ 1 ಲಕ್ಷ ಟನ್ ಬಾಸ್ಮತಿ ಅಕ್ಕಿ..!

536

ನ್ಯೂಸ್ ನಾಟೌಟ್: ಇಸ್ರೇಲ್‌ ಹಾಗೂ ಇರಾನ್‌ ಸಂಘರ್ಷದಿಂದ ಭಾರತದ ಅಕ್ಕಿ ರಫ್ತಿನ ಮೇಲೆ ಭಾರೀ ಹೊಡೆತ ಬಿದ್ದಿದೆ. ಇರಾನ್‌ ಗೆ ರಫ್ತಾಗಬೇಕಿದ್ದ ಸುಮಾರು 1 ಲಕ್ಷ ಟನ್ ಬಾಸ್ಮತಿ ಅಕ್ಕಿ ಭಾರತದ ಬಂದರುಗಳಲ್ಲೇ ಉಳಿದುಕೊಂಡಿದೆ ಎಂದು ಅಖಿಲ ಭಾರತ ಅಕ್ಕಿ ರಫ್ತುದಾರರ ಸಂಘ ಮಾಹಿತಿ ನೀಡಿದೆ.

ಸೌದಿ ಅರೇಬಿಯಾದ ನಂತರ ಭಾರತದಿಂದ ಹೆಚ್ಚು ಬಾಸ್ಮತಿ ಅಕ್ಕಿ ಆಮದು ಮಾಡಿಕೊಳ್ಳುವ ರಾಷ್ಟ್ರ ಇರಾನ್ ಆಗಿದೆ. ಕಳೆದ ಹಣಕಾಸು ವರ್ಷದಲ್ಲಿ ಬರೋಬ್ಬರಿ 10 ಲಕ್ಷ ಟನ್ ಬಾಸ್ಮತಿ ಅಕ್ಕಿ ಭಾರತದಿಂದ ಇರಾನ್‌ಗೆ ರಫ್ತಾಗಿತ್ತು. ಈಗ ನಡೆಯುತ್ತಿರುವ ಸಂಘರ್ಷದಿಂದಾಗಿ, ರಫ್ತಾಗಬೇಕಿದ್ದ 18% – 20% ರಷ್ಟು ಬಾಸ್ಮತಿ ಅಕ್ಕಿ ಇಲ್ಲೇ ಉಳಿಯುವಂತಾಗಿದೆ.

ಇರಾನ್‌ ಗೆ ತೆರಳಬೇಕಿದ್ದ ಅಕ್ಕಿ ತುಂಬಿದ ಹಡಗುಗಳು ಗುಜರಾತ್‌ ನ ಕಾಂಡ್ಲಾ ಹಾಗೂ ಮುಂಡ್ರಾ ಬಂದರಿನಲ್ಲೇ ಉಳಿದಿವೆ. ಸಂಘರ್ಷ ನಡೆಯುತ್ತಿರುವುದರಿಂದ ಹಡಗಿನಲ್ಲಿರುವ ಸರಕಿಗೆ ವಿಮೆ ಅನ್ವಯವಾಗುವುದಿಲ್ಲ. ಇದರಿಂದ ರಫ್ತುದಾರರು ನಷ್ಟವಾಗುವ ಆತಂಕದಲ್ಲಿದ್ದಾರೆ. ದೇಶೀಯ ಬಾಸ್ಮತಿ ಅಕ್ಕಿ ಬೆಲೆಯಲ್ಲಿ ಕೇಜಿಗೆ 4ರಿಂದ 5 ರೂ. ಕಡಿಮೆಯಾಗಿರುವುದು ರಫ್ತುದಾರರನ್ನು ಮತ್ತಷ್ಟು ಚಿಂತೆಗೆದೂಡಿದೆ.

ಇಲ್ಲೇ ಇರು ಬರುತ್ತೇನೆಂದು ವೃದ್ಧೆ ತಾಯಿಯನ್ನು ರಸ್ತೆ ಬದಿಯಲ್ಲಿ ಬಿಟ್ಟು ಮಗ ಪರಾರಿ..! ಆಹಾರ ನೀಡಿ ಸಲಹಿದ ಸ್ಥಳೀಯರು..!

See also  ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ, ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಪರಿಸರ ಉಳಿಸಿ : ಡಾ. ಕೆ.ವಿ. ಚಿದಾನಂದ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget