ಕ್ರೈಂಬೆಂಗಳೂರುವೈರಲ್ ನ್ಯೂಸ್

ರಾತ್ರಿ ಕಸ ಎಸೆಯಲು ಹೋಗಿದ್ದ ಯುವತಿಯನ್ನು ತಬ್ಬಿಕೊಂಡು ಖಾಸಗಿ ಅಂಗಗಳನ್ನು ಮುಟ್ಟಿದ ಅಪ್ರಾಪ್ತರು..! ಆ ರಾತ್ರಿ ಆಕೆಯ ಜೊತೆ ಗೆಳೆಯನೂ ಇದ್ದನಾ..?

174

ನ್ಯೂಸ್ ನಾಟೌಟ್: ರಾತ್ರಿ ವೇಳೆ ಕಸ ಎಸೆಯುವುದಕ್ಕೆ ಹೋಗಿದ್ದ ಯುವತಿಯನ್ನು ಕಿಡಿಗೇಡಿಗಳು ತಪ್ಪಿಕೊಂಡು ಖಾಸಗಿ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೋರಮಂಗದಲ್ಲಿ ನಡೆದಿದೆ. ಯಾರೂ ಇಲ್ಲದ ನಿರ್ಜನ ಪ್ರದೇಶದಲ್ಲಿ ಮಾತ್ರವಲ್ಲ ಜನವಸತಿ ಹಾಗೂ ಸಾರ್ವಜನಿಕ ಸ್ಥಳದಲ್ಲಿಯೇ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವ ಘಟನೆಗಳು ಆಗಾಗ ಬೆಳಕಿಗೆ ಬರುತ್ತಿವೆ.

ಅದೇ ರೀತಿ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊರಮಂಗಲ ಆಟೋ ಸ್ಟಾಂಡ್ ಬಳಿಯಲ್ಲಿ ಕಸ ಎಸೆಯಲು ಹೋಗಿದ್ದ ಯುವತಿಯನ್ನು ಹಿಡಿದುಕೊಂಡು ಯುವಕನೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಬಿಬಿಎಂಪಿ ವಾಹನಗಳಿಗೆ ಹಸಿ ಮತ್ತು ಒಣ ಕಸವನ್ನು ಬೇರೆ ಬೇರೆ ಮಾಡಿ ಕೊಡಬೇಕು ಎಂಬ ನಿಯಮವಿದೆ. ಆದರೆ, ಕೆಲವರು ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದರೆ ಸಂಜೆ ವೇಳೆಗೆ ಮನೆಗೆ ಬರುತ್ತಾರೆ. ಅಂತಹ ಮನೆಗಳಲ್ಲಿ ವಾಸಿಸುವ ಜನರು ರಸ್ತೆಬದಿ ಅಥವಾ ಕಾಲುವೆಗಳ ಬಳಿ ಇರುವ ಸ್ಥಳದಲ್ಲಿ ಕಸ ಎಸೆದು ಬರುತ್ತಾರೆ.

ಅದೇ ರೀತಿ ಕೋರಮಂಗಲದ ಆಟೋ ನಿಲ್ದಾಣದ ಬಳಿ ಇರುವ ಜಾಗದಲ್ಲಿ ಕಸವನ್ನು ಎಸೆಯಲು ಹೋಗಿದ್ದ ಯುವತಿ ಈಗ ಲೈಂಗಿಕ ಕಿರುಕುಳ ಅನುಭವಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಜ.28ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ರಾತ್ರಿ ಯುವತಿಯೊಬ್ಬಳು ತನ್ನ ಸ್ನೇಹಿತನೊಂದಿಗೆ ಮಧ್ಯರಾತ್ರಿ ವೇಳೆ ಕಸ ಎಸೆಯಲು ಹೋಗಿದ್ದಳು. ಈ ವೇಳೆ ಕೊರಮಂಗಲ ಆಟೋ ಸ್ಟಾಂಡ್ ಬಳಿ ಕುಳಿತಿದ್ದ ಪುಂಡರ ಗುಂಪು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ-ಯುವತಿಯನ್ನು ಹಿಂಬಾಲಿಸಿಕೊಂಡು ಹೋಗಿದೆ.

ನಂತರ, ನಿರ್ಜನ ಪ್ರದೇಶದಲ್ಲಿ ಕಸ ಎಸೆದು ವಾಪಸ್ ಬರುವಾಗ ಅವರನ್ನು ಹಿಂಬಾಲಿಸಿದ ಪುಂಡರ ಗುಂಪಿನಲ್ಲಿದ್ದ ನಾಲ್ವರು, ಯುವತಿಯನ್ನು ಅಡ್ಡಗಟ್ಟಿ ಹಿಡಿದುಕೊಂಡಿದ್ದಾರೆ. ಈ ವೇಳೆ ತಡೆಯಲು ಮುಂದಾದ ಯುವತಿಯ ಸ್ನೇಹಿತನಿಗೂ ಥಳಿಸಿದ್ದಾರೆ. ನಂತರ, ಯುವತಿಯ ಬಾಯಿ ಮುಚ್ಚಿ ಹಿಡಿದುಕೊಂಡು ಆಕೆಯ ಖಾಸಗಿ ಅಂಗಗಳನ್ನು ಕೆಟ್ಟದಾಗಿ ಸ್ಪರ್ಶ ಮಾಡಿದ್ದಾರೆ.

ಇದಕ್ಕೆ ಯುವತಿ ತೀವ್ರ ಪ್ರತಿರೋಧ ತೋರಿದಾಗ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಯುವತಿ ಗಾಯಗೊಂಡಿದ್ದಾಳೆ. ನಂತರ, ಯುವಕ ರಕ್ಷಣೆಗಾಗಿ ಕೂಗಿಕೊಂಡಾಗ ಆತನಿಗೆ ಮತ್ತೆ ಥಳಿಸಿ ಅಲ್ಲಿಂದ ಇಬ್ಬರನ್ನೂ ಬಿಟ್ಟು ಪರಾರಿ ಆಗಿದ್ದಾರೆ ಎಮದು ವರದಿ ತಿಳಿಸಿದೆ. ಇನ್ನು ಗಾಯಗೊಂಡ ಯುವತಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದು ನಂತರ, ಆಡುಗೋಡಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ನಾಲ್ವರು ಕೂಡ ಅಪ್ರಾಪ್ತ ಬಾಲಕರು ಎಂದು ತನಿಖೆಯಲ್ಲಿ ಬಯಲಾಗಿದೆ.

See also  ಸರ್ಕಾರ ರಚನೆಗೆ ಕಾಂಗ್ರೆಸ್ ನ ತೆರೆ ಮರೆಯ ಕಸರತ್ತು ಫಲ ನೀಡುತ್ತಾ..? ಇಂದು(ಜೂ.5) ಸಂಜೆ ಖರ್ಗೆ ನಿವಾಸದಲ್ಲಿ ಮಹತ್ವದ ರಣತಂತ್ರ ಹೆಣೆಯಲು ತಯಾರಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget