ನ್ಯೂಸ್ ನಾಟೌಟ್: ಯಾದಗಿರಿಯ ಜೈನ್ ಬಡಾವಣೆಯ ನಿವಾಸಿ ನಿಖಿತಾ ಎಂಬ ಯುವತಿ ಕೇವಲ ತನ್ನ 26ನೇ ವಯಸ್ಸಿಗೆ ಜೈನ ಮುನಿ ಆಗಿದ್ದರು. ಈಗ ಅದೇ ರೀತಿಯ ಮತ್ತೊಂದು ಘಟನೆ ನಡೆದಿದೆ.100 ಕೋಟಿಗೂ ಅಧಿಕ ರೂ. ಆಸ್ತಿ ಒಡೆಯ, ಮೂವರು ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು ಬಿಟ್ಟು ಇದೀಗ ಜೈನ ಮುನಿ ಆಗಲು ಹೊರಟಿದ್ದಾರೆ.
ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದ ನಿವಾಸಿ ದಿಲೀಪ್ ಕುಮಾರ್ ದೋಖಾ ಎಂಬುವವರು ಜೈನ ದೀಕ್ಷೆ ಪಡೆದಿದ್ದಾರೆ. ಆ ಮೂಲಕ ಪತ್ನಿ ಮಕ್ಕಳನ್ನ ಬಿಟ್ಟು ಜೈನ ಮುನಿಯಾಗಲು ಹೊರಟಿದ್ದಾರೆ. ನೂರು ಕೋಟಿ ಆಸ್ತಿ ಐಷಾರಾಮಿ ಬಂಗಲೆ, ಕಾರು, ವ್ಯಾಮೋಹದ ಜೀವನ ತ್ಯಜಿಸಿ ಸನ್ಮಾರ್ಗದ ಕಡೆ ಪ್ರಯಾಣ ಬೆಳೆಸಿದ್ದಾರೆ.
ದಿಲೀಪ್ ಕುಮಾರ್ ದೋಖಾ ಕಳೆದ 12 ವರ್ಷಗಳಿಂದ ಅಮೆರಿಕಾದಲ್ಲಿ ಮೆಡಿಸಿನ್ ಉತ್ಪಾದನಾ ವ್ಯವಹಾರ ಮಾಡುತ್ತಿದ್ದರು. ಬೆಂಗಳೂರಿನಲ್ಲೂ ಆಸ್ತಿ ಹೊಂದಿದ್ದಾರೆ. ದಿಲೀಪ್ ಕುಮಾರ್ ದೋಖಾಗೆ ಮದುವೆ ಕೂಡ ಆಗಿದ್ದು, ಮೂರು ಹೆಣ್ಣು ಮಕ್ಕಳ ತಂದೆಯಾಗಿದ್ದಾರೆ. ಮಕ್ಕಳ ಮದುವೆ ಮಾಡಿ ಇದೀಗ ಪತ್ನಿಯನ್ನ ಒಬ್ಬೊಂಟಿಯಾಗಿ ಬಿಟ್ಟು ಜೈನ ಮುನಿ ಆಗಿ ಪರಿವರ್ತನೆ ಆಗಿದ್ದಾರೆ.
55 ವರ್ಷದ ದಿಲೀಪ್ ಕುಮಾರ್ ದೋಖಾ14 ವರ್ಷದಲ್ಲೇ ಜೈನ್ ದೀಕ್ಷೆ ಪಡೆಯಲು ಹೋಗಿದ್ದರು. ಪೋಷಕರು ಬೇಡ ಅಂದಿದ್ದಕ್ಕೆ ವಾಪಸ್ ಆಗಿದ್ದರು. ಆದರೆ ಇದೀಗ ಮತ್ತೆ ಜೈನ್ ದೀಕ್ಷೆ ಪಡೆದುಕೊಳ್ಳುವ ಮೂಲಕ ಬರೋಬ್ಬರಿ 41 ವರ್ಷದ ಬಳಿಕ ತಾವು ಹಿಂದೆ ಮಾಡಲು ಆಗದ ಕೆಲಸ ಮಾಡಿದ್ದಾರೆ.
ಇನ್ನು ಜೈನ್ ದೀಕ್ಷೆ ಪಡೆದಿದ್ದಕ್ಕೆ ಕುಟುಂಬಸ್ಥರು ಹಾಗೂ ಸಂಬಂಧಿಕರಿಂದ ಕೊನೆಯದಾಗಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಬಿಳ್ಕೋಡುಗೆ ನೀಡಲಾಗಿದೆ. ಸೈದಾಪುರ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾರೋಟದಲ್ಲಿ ಮೆರವಣಿಗೆ ಮಾಡಿದ್ದಾರೆ.
ಕರ್ನಾಟಕ ಸರ್ಕಾರದ ಒಡೆತನದಲ್ಲಿರುವ ಬ್ರ್ಯಾಂಡ್ ಗೆ ತಮಿಳಿನ ನಟಿ ರಾಯಭಾರಿ..! 6.20 ಕೋಟಿ ರೂಪಾಯಿ ಸಂಭಾವನೆ..!