ರಾಜಕೀಯವೈರಲ್ ನ್ಯೂಸ್

ವಿಪಕ್ಷಗಳ ಸಭೆಗೆ ಜೆಡಿಎಸ್‌ಗೆ ಆಹ್ವಾನ ನೀಡದ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿದ್ದೇನು? ಡಿಸಿಎಂ ಡಿ.ಕೆ. ಶಿ ಕೊಟ್ಟ ಸುಳಿವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ಸರ್ವಾಧಿಕಾರಿ ಧೋರಣೆ ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಂದು ವಿರೋಧ ಪಕ್ಷಗಳ ಸಭೆಗೆ ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡದಿರುವ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.

ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ತೋರಿಸಿದ್ದಾರೆ.‌ ಕಳೆದ ವರ್ಷವೇ ಜೆಡಿಎಸ್‌ನವರು ಸಾಬೀತುಪಡಿಸಿದ್ದಾರೆ. ವಿಪಕ್ಷಗಳ ಒಕ್ಕೂಟಕ್ಕೆ ನಾಯಕರು ಯಾರು ಎಂಬ ಬಗ್ಗೆ ಚಿಂತಿಸಬೇಡಿ. ‌ದೇಶದ ಪರಿಸ್ಥಿತಿಯ ಬಗ್ಗೆ ಯೋಚನೆ ಮಾಡಿ ಎಂದಿದ್ದಾರೆ.
ಇಂದು ರಾಷ್ಟ್ರೀಯ ನಾಯಕರಿಗೆ ಔತಣಕೂಟ ಇದೆ. ‌ನಾಳೆ ಬೆಳಿಗ್ಗೆ ಅಧಿಕೃತ ಸಭೆ ಪ್ರಾರಂಭವಾಗಲಿದೆ. ‌ಇದರಿಂದ ಪ್ರಧಾನಿ ಮೋದಿ ಹಾಗೂ ಆಡಳಿತ ಪಕ್ಷಕ್ಕೆ ಭಯ ಶುರುವಾಗಿದೆ. ನಮ್ಮ ಪಟ್ನಾ ಸಭೆ ಬಳಿಕ ಪ್ರಧಾನಿಗಳಿಗೆ ಎನ್‌ಡಿಎ ಮೈತ್ರಿಕೂಟದ ನೆನಪಾಗಿದೆ.‌ ಇಷ್ಟು ದಿನ ಎನ್‌ಡಿಎ ನೆನಪೇ ಇರಲಿಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಕರ್ನಾಟಕದಲ್ಲಿ ಯಡಿಯೂರಪ್ಪ ಆಪರೇಷನ್ ಕಮಲದ ಮೂಲಕ ಸರ್ಕಾರ ನಡೆಸಿದರು. ‌ಆದರೆ, ಈಗ ಅವರ ಪರಿಸ್ಥಿತಿ ಏನಾಯ್ತು ? ಮಹಾರಾಷ್ಟ್ರದಲ್ಲೂ ಕೂಡಾ ಅದೇ ಆಗಲಿದೆ. ಸಭೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುತ್ತಿರುವುದು ನಮಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ‌ ಎಂದಿದ್ದಾರೆ

Related posts

ಸುಳ್ಯ: ಮನೆಯವರು ಮದುವೆ ತಯಾರಿಯಲ್ಲಿರುವಾಗಲೇ ಪ್ರೀತಿಸಿದ ಹುಡುಗನ ಜೊತೆ ಹೋದಳೇ ಯುವತಿ..? ಏನಿದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ..?

ಶೋಭಕ್ಕನ ಹಾವು ಹಿಡಿದ ಸಾಹಸಮಯ ವಿಡಿಯೋ ವೈರಲ್, ಯಾರಿವರು ಶೋಭಕ್ಕ..? ಕೊನೆಗೂ ಸಿಕ್ಕಿತು ಉತ್ತರ

ಸುಳ್ಯದಲ್ಲಿ ಕಾಂಗ್ರೆಸ್ ನಿಂದ ಶಕ್ತಿ ಪ್ರದರ್ಶನ,ಎದುರಾಳಿಗೆ ವಾಗ್ದಾಳಿ ಮೂಲಕ ನಡುಗಿಸಿದ ಖರ್ಗೆ