ರಾಜಕೀಯ

ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರ ಸ್ವಾಮಿ ರಾಜಿನಾಮೆ! ಕುತೂಹಲ ಮೂಡಿಸಿದ ಯುವ ದಳಪತಿಯ ನಡೆ!

207

ನ್ಯೂಸ್ ನಾಟೌಟ್ : ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸೋಲಾಗಿ ತೀವ್ರ ಮುಖಭಂಗ ಅನುಭವಿಸುವುದರ ಜೊತೆಗೆ ಬಹಳ ನಿರೀಕ್ಷೆಯಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದರು. ಇದೀಗ ಜೆಡಿಎಸ್ ಪಾರ್ಟಿಯ ಯುವ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.

ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸಿದ್ದು ಸೋಲು ಕಂಡಿದ್ದರು. ಈ ನಿಟ್ಟಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ ಇವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು “ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ. ಪಕ್ಷದ ಜತೆ ಸದಾ ನಿಲ್ಲುವೆ. ಪಕ್ಷ ಕಟ್ಟುವ ಕಾರ್ಯದಲ್ಲಿ ದೇವೇಗೌಡರ ಮತ್ತು ಕುಮಾರಸ್ವಾಮಿಯ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

See also  ಮೋದಿ ಪರ ಘೋಷಣೆ ಕೂಗಿದವರ ಶೇಕ್ ಹ್ಯಾಂಡ್‌ ಮಾಡಿದ ರಾಹುಲ್..!'ಪ್ರೀತಿಯಲ್ಲಿ ದೊಡ್ಡ ಶಕ್ತಿ ಇದೆ' ಎಂದ ಕಾಂಗ್ರೆಸ್‌..!ವಿಡಿಯೋ ವೈರಲ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget