ನ್ಯೂಸ್ ನಾಟೌಟ್: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ಅವರು ರಾಜೀನಾಮೆ ಘೋಷಿಸಿದ್ದಾರೆ ಎಂದು ವರದಿಯಾಗಿದೆ.ಈ ಕುರಿತು ಕೊಯಮತ್ತೂರಿನಲ್ಲಿ ಅವರು ಮಾತನಾಡುತ್ತಾ, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್ನಲ್ಲಿಲ್ಲ ಎಂದು ಹೇಳಿದ್ದಾರೆ.
ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು ಪಕ್ಷದ ಅಧ್ಯಕ್ಷ ಹುದ್ದೆಯ ರೇಸ್ನಲ್ಲಿ ಇಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡಲ್ಲ ಅಂತ ತಿಳಿಸಿದ್ದಾರೆ.
Coimbatore, Tamil Nadu: State BJP chief K Annamalai says, "There is no contest in Tamil Nadu BJP, we will select a leader unanimously. But I am not in the race. I am not in the BJP state leadership race." pic.twitter.com/7OjdbOoTWR
— ANI (@ANI) April 4, 2025