ಕರಾವಳಿಸುಳ್ಯ

ಕಡಬ: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಟಿಪ್ಪರ್ ವಶಕ್ಕೆ , ಗೋಮಾಂಸ ಮಾರಾಟದ ಶಂಕೆ

215

ನ್ಯೂಸ್ ನಾಟೌಟ್ : ರಾಮಕುಂಜ ಚೆಕ್ ಪೋಸ್ಟ್ ನಲ್ಲಿ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿ ಪಿಕಪ್ ವೊಂದು ಪರಾರಿಯಾಗಿದ್ದು,ಕಡಬ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಕಡಬದ ಆತೂರಿನಲ್ಲಿ ನಡೆದಿದೆ.ಪೊಲೀಸರ ಸೂಚನೆಯನ್ನು ಉಲ್ಲಂಘಸಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಈ ಪಿಕಪ್ ಪರಾರಿಯಾಗಿತ್ತು ಎನ್ನಲಾಗಿದೆ.  

ಕೊಯಿಲದಿಂದ ಗೋಳಿತ್ತಡಿ ಕಡೆಗೆ ಬರುತ್ತಿದ್ದ ಪಿಕಪ್ ವಾಹನವೊಂದನ್ನು ಆತೂರಿನಲ್ಲಿ ಚುನಾವಣಾ ಹಿನ್ನೆಲೆಯಲ್ಲಿ ಹಾಕಲಾಗಿರುವ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರತ ಪೊಲೀಸರು ನಿಲ್ಲಿಸುವಂತೆ ಸೂಚನೆ ನೀಡಿದ್ದರು.  ಆದರೆ ಪಿಕಪ್ ವಾಹನ ಚಾಲಕ ಪೊಲೀಸರ ಸೂಚನೆಯನ್ನು ಲೆಕ್ಕಿಸದೆ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿ ಪರಾರಿಯಾಗಿದ್ದರು.ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಶಂಕೆ ಮೇರೆಗೆ ಸ್ಥಳೀಯ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಿಕಪ್ ವಾಹನಕ್ಕಾಗಿ ಶೋಧ ನಡೆಸಿದ ವೇಳೆ ಶಾರದಾ ನಗರದಲ್ಲಿ ಪತ್ತೆಯಾಗಿದೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

See also  ಮಂಗಳೂರು ಬಾಂಬ್ ಸ್ಪೋಟ ಪ್ರಕರಣ, ಹೊಣೆ ಹೊತ್ತುಕೊಂಡ ಐಸಿಸ್
  Ad Widget   Ad Widget   Ad Widget   Ad Widget   Ad Widget   Ad Widget   Ad Widget