ರಾಜಕೀಯ

ಕಾಲಭೈರವನಿಗೆ ವಿಶೇಷ ಪೂಜೆ ನೆರವೇರಿಸಿದ ನೂತನ ಡಿಸಿಎಂ ಡಿಕೆ ಶಿವಕುಮಾರ್! ಡಿಸಿಎಂ ಆದ ಬಳಿಕ ಆದಿಚುಂಚನಗಿರಿ ಮಠಕ್ಕೆ ಮೊದಲ ಭೇಟಿ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಭಾನುವಾರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಡಿಸಿಎಂ ಆದ ಬಳಿಕ ಮೊದಲ ಬಾರಿಗೆ ಭೇಟಿ ನೀಡಿದ ಡಿ ಕೆ ಶಿವಕುಮಾರ್ ಅವರಿಗೆ ಪೂರ್ಣಕುಂಭ ಸಹಿತ ಅದ್ಧೂರಿ ಮೆರವಣಿಗೆ ಮೂಲಕ ಮಠದ ಆಡಳಿತ ಮಂಡಳಿಯಿಂದ ಭವ್ಯ ಸ್ವಾಗತ ಕೋರಿದರು.

ಬಳಿಕ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಈ ವೇಳೆ ಕಾಲ ಭೈರವನ ದರ್ಶನ ಪಡೆದು ಡಿ ಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ನಿರ್ಮಲಾನಂದನಾಥ ಸ್ವಾಮೀಜಿ ಅವರ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಹಾಗೂ ನೂತನ‌ ಉಪಮುಖ್ಯಮಂತ್ರಿಗೆ ಕೆಲವೊಂದಿಷ್ಟು ಸಲಹೆ ಸೂಚನೆ ನೀಡಿದರು. ಸಿಎಂ ಪಟ್ಟ ಕೈತಪ್ಪಿದ ಬಗ್ಗೆಯೂ ಡಿ ಕೆ ಶಿ ಬಳಿ ಸ್ವಾಮೀಜಿ ಮಾಹಿತಿ ಪಡೆದರು ಎಂದು ವರದಿ ತಿಳಿಸಿದೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಭಕ್ತ, ಭಗವಂತನಿಗೆ ಕೈ ಮುಗಿಯಲು ಬಂದಿದ್ದೇನೆ. ನಾನು ಈ ಹಿಂದೆ ಹೇಳಿದ್ದೇನೆ. ಧರ್ಮ ಯಾವುದಾದರೂ ತತ್ವ ಒಂದೇ. ನಾಮ ನೂರಾದರೂ ದೈವ ಒಂದೇ. ಪೂಜೆ ಯಾವುದಾದರೂ ಭಕ್ತಿ ಒಂದೆ. ಕರ್ಮ ಯಾವುದಾದರೂ ನಿಷ್ಠೆ ಒಂದೆ. ದೇವನೊಬ್ಬ ನಾಮ ಹಲವು. ಎಲ್ಲ ಸಮಾಜದವರಿಗೆ ಅವರದ್ದೇ ಅದ ನಂಬಿಕೆ ಇರುತ್ತೆ ಎಂದರು.

Related posts

ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರ ಹಾಕುವ ಹಕ್ಕಿದೆ-ಪ್ರತಾಪ ಸಿಂಹ

ಇಸ್ರೇಲ್ ಪ್ರಧಾನಿ ಜೊತೆ ಪಿಎಂ ಮೋದಿ ದಿಢೀರ್ ಮಾತುಕತೆ ನಡೆಸಿದ್ದೇಕೆ?ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮೋದಿ ಬರೆದುಕೊಂಡದ್ದೇನು?

ಸಾಕ್ಷ್ಯವನ್ನು ವೈಟ್ನರ್‌ ಹಾಕಿ ತಿರುಚಿದ್ರಾ ಮುಡಾ ಅಧಿಕಾರಿಗಳು..? ಅಷ್ಟಕ್ಕೂ ಸಿಎಂ ಸಿದ್ದರಾಮಯ್ಯ ಪತ್ನಿ ಬರೆದ ಪತ್ರದಲ್ಲೇನಿತ್ತು..?