ಕರಾವಳಿ

ಬೆಳ್ಳಾರೆ: ಚಿಕಿತ್ಸೆ ಫಲಿಸದೆ ಮುಸ್ಲಿಂ ಯುವಕ ಸಾವು

420

ನ್ಯೂಸ್ ನಾಟೌಟ್: ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಗುರುವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್ ಮತ್ತು ಭಾಸ್ಕರ್ ಬಂಧಿತರಾಗಿದ್ದಾರೆ.‌ ಬಂಧಿತ ಆರೋಪಿಗಳ ಮೇಲೆ ಪೊಲೀಸರು ಕೊಲೆ ಕೇಸು ದಾಖಲಿಸಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಇದೀಗ ಬೆಳ್ಳಾರೆ ಭಾಗದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದ್ದು ಪೊಲೀಸರು ಬಿಗಿ ಭದ್ರತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

See also  ಎಸ್ ಎಸ್ ಎಫ್ ಸುಳ್ಯ ವಿಭಾಗ ವತಿಯಿಂದ 308ನೇ ರಕ್ತದಾನ ಶಿಬಿರ, ಸಂಘಟನೆಯ ಕಾರ್ಯಕ್ಕೆ ಶಾಸಕಿ ಕು.ಭಾಗೀರಥಿ ಮುರುಳ್ಯ ಶ್ಲಾಘನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget