ಉಪ್ಪಿನಂಗಡಿಕರಾವಳಿಕ್ರೈಂಮಂಗಳೂರು

ಬೆಳ್ತಂಗಡಿ: ಬಸ್ ​​​ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಝೀಮ್ ನಿಂದ ಕಿರುಕುಳ ಆರೋಪ, ಯುವತಿಯನ್ನು ಭೇಟಿ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್

179

ನ್ಯೂಸ್ ನಾಟೌಟ್ : ಬಸ್​​​ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕೇಳಿಬಂದಿದೆ. ಘಟನೆ ಸಂಬಂಧ ದೂರು ದಾಖಲಾಗಿದ್ದು, ಬೆಳ್ತಂಗಡಿ ಲಾಯಿಲಾ ನಿವಾಸಿ ಅಝೀಮ್ ಎಂಬಾತನನ್ನು ಉಪ್ಪಿನಂಗಡಿ ಪೋಲೀಸರು ಬಂಧಿಸಿದ ಘಟನೆ ಎಪ್ರಿಲ್ ೨೫ ರಂದು ನಡೆದಿದೆ.

ಇದರ ಬೆನ್ನಲ್ಲೇ, ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತದಲ್ಲಿ ಸಾಮಾನ್ಯ ಮುಸ್ಲಿಮರೂ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಯುವತಿ ಬಸ್​ನಲ್ಲಿದ್ದಾಗ ಆರೋಪಿ ಅಝೀಮ್ ಕಿರುಕುಳ ನೀಡಿದ್ದ. ಇದೇ ವೇಳೆ, ಯುವತಿ ಪ್ರತಿಭಟಿಸಿದಾಗ ಆತ ಬಸ್​ನ ಕಿಟಕಿಯಿಂದ ಹಾರಿ ತಪ್ಪಿಸಿದ್ದ ಎನ್ನಲಾಗಿದೆ. ಬಳಿಕ ಉಪ್ಪಿನಂಗಡಿ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ ಭಟ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ‌ ಸಂತ್ರಸ್ತೆ ಯುವತಿಯನ್ನು ಭೇಟಿ ಮಾಡಿ ಧೈರ್ಯ ಹೇಳಿದ್ದಾರೆ. ನಂತರ ರಾಜ್ಯ ಸರ್ಕಾರದ ವಿರುದ್ಧ ಪ್ರಭಾಕರ್ ಭಟ್ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದೂಗಳ ಮೇಲೆ ಇಂಥ ಘಟನೆಗಳು ನಿರಂತರವಾಗಿ ನಡೆಯುತ್ತಿದೆ. ಸಾಮಾನ್ಯ ಮುಸ್ಲಿಮರಂತೆ ಕಾಣುವವರು ಕೂಡ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದ್ದಾರೆ. ದಕ್ಷಿಣ ಕನ್ನಡದ ಜನತೆ ಇಂಥ ಘಟನೆಗಳನ್ನು ಸಹಿಸುವುದಿಲ್ಲ. ಸರ್ಕಾರ, ಪೋಲೀಸ್ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದೇ ಹೋದಲ್ಲಿ ಜಿಲ್ಲೆಯಲ್ಲಿ ಅರಾಜಕತೆ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

See also  ಸುಳ್ಯ:ಕಾರಣಿಕ ಕ್ಷೇತ್ರ  ಕೊರಂಬಡ್ಕ ಕೊರಗಜ್ಜ ದೈವಸ್ಥಾನದಲ್ಲಿ ನೇಮೋತ್ಸವ;ಊರ-ಪರವೂರ ಸಾವಿರಾರು ಭಕ್ತರು ಭಾಗಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget