ನ್ಯೂಸ್ ನಾಟೌಟ್: ಕಲ್ಲಡ್ಕದ ಹನುಮಾನ್ ನಗರದದಲ್ಲಿ ನಡೆದ ಆಗತ ಸ್ವಾಗತ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ-ಸಮಾಜ ಸೇವಕ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಪಾಲ್ಗೊಂಡರು.
ಈ ಕಾರ್ಯಕ್ರಮದಲ್ಲಿ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪಾಲ್ಗೊಂಡಿದ್ದರು. ರಾಷ್ಟ್ರ ರಕ್ಷಣೆ ಜಾಗೃತಿಯ ವಿಚಾರ ಧಾರೆಯ ಬಗ್ಗೆ ಮಕ್ಕಳಿಗೆ ತಿಳಿಸುವ ಕಾರ್ಯಕ್ರಮ ನಡೆಯಿತು.
ಈ ವೇಳೆ ಮಾತನಾಡಿದ ಕಿರಣ್ ಚಂದ್ರ ಡಿ ಪುಷ್ಪಗಿರಿ ಅವರು,’ ಸನಾತನ ಹಿಂದೂ ಧರ್ಮದ ರಕ್ಷಣೆಗೆ ನಾವೆಲ್ಲರೂ ಸದಾ ಸಿದ್ಧವಾಗಿರಬೇಕು. ಹಿಂದೂ ಧರ್ಮದ ರಕ್ಷಣೆಗೆ ಕಲ್ಲಡ್ಕ ಪ್ರಭಾಕರ ಭಟ್ ಅವರ ಕೊಡುಗೆ ಅಪಾರ ಮತ್ತು ಅವಿಸ್ಮರಣೀಯ ಎಂದು ಸ್ಮರಿಸಿದರು.