ಕರಾವಳಿ

ಕಲ್ಲುಗುಂಡಿ ಸಂಪತ್ ಕುಮಾರ್ ಕೊಲೆ ಪ್ರಕರಣ : ಒಂದನೇ ಆರೋಪಿಗೆ ಷರತ್ತು ಬದ್ಧ ಜಾಮೀನು ಮಂಜೂರು

ನ್ಯೂಸ್‌ ನಾಟೌಟ್‌ : ಸಂಪಾಜೆಯ ಬಿಜೆಪಿ ಪ್ರಭಾವಿ ಮುಖಂಡ ಬಾಲಚಂದ್ರ ಕಳಗಿ ಅವರ ಕೊಲೆ ಪ್ರಕರಣದ ಆರೋಪಿ ಕಲ್ಲುಗುಂಡಿ ನಿವಾಸಿ ಸಂಪತ್‌ ಕುಮಾರ್ ಕೊಲೆ ಪ್ರಕರಣದ ಒಂದನೇ ಆರೋಪಿಗೆ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದುಬಂದಿದೆ.

2020ರ ಅಕ್ಟೋಬರ್ 8ರಂದು ಸುಳ್ಯ ಶಾಂತಿನಗರದ ಬಾಡಿಗೆ ಮನೆಯಲ್ಲಿದ್ದ ಕಲ್ಲುಗುಂಡಿಯ ಸಂಪತ್ ಎಂಬವರನ್ನು 8 ಮಂದಿಯ ತಂಡ ಅಟ್ಟಾಡಿಸಿಕೊಂಡು ಹೋಗಿ ಕೊಲೆ ಮಾಡಿತ್ತು.ಆ ಎಲ್ಲ ಆರೋಪಿಗಳನ್ನು ಪೋಲೀಸರು ಬಂಧಿಸಿದ್ದರು.

ಒಂದನೇ ಆರೋಪಿಯಾಗಿರುವ ಮನೋಹರ್ ಕೆ.ಎಸ್. ಯಾನೆ ಮನು ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪುತ್ತೂರು ಇಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ, ಬಿಡುಗಡೆಗೆ ಆದೇಶ ಮಾಡಿರುವುದಾಗಿ ತಿಳಿದುಬಂದಿದೆ. ಆರೋಪಿಯ ಪರವಾಗಿ ವಕೀಲರಾದ ವಿಕ್ರಮ್ ಹೆಗ್ಡೆ ಮಂಗಳೂರು ಮತ್ತು ಎಸ್.ಕೆ. ವಿನಯ್ ಸೋಣಂಗೇರಿ ವಾದಿಸಿದ್ದಾರೆ.

Related posts

Gruha Jyothi Scheme:ಗೃಹಜ್ಯೋತಿ ಯೋಜನೆಯ ಫ್ರೀ ವಿದ್ಯುತ್ ನಿರೀಕ್ಷೆಯಲ್ಲಿದ್ದವರಿಗೆ ಕರೆಂಟ್ ಶಾಕ್ ..!,ಬೆಸ್ಕಾಂ ಸಿಬ್ಬಂದಿ ಕರೆಂಟ್ ಬಿಲ್ ನೀಡಿದಾಗಲೇ ಗೊತ್ತಾಯ್ತು ಅಸಲಿ ವಿಚಾರ..!

ಅರಂತೋಡು:47ನೇ ನ್ಯಾಶನಲ್ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ ರಮ್ಯ ಪವನ್ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಮಡಿಕೇರಿ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ,ಪೋಕ್ಸೋ ಪ್ರಕರಣದಡಿ 20 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ