ಕರಾವಳಿಸುಳ್ಯ

ಕಲ್ಮಡ್ಕ: ಕಾಚಿಲ ಶ್ರೀಮಹಾವಿಷ್ಣುಮೂರ್ತಿ ದೈವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಒತ್ತೆಕೋಲ ನಡಾವಳಿ, ಸಾವಿರಾರು ಜನ ಸೇರುವ ನಿರೀಕ್ಷೆ

193

ನ್ಯೂಸ್ ನಾಟೌಟ್: ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕಲ್ಮಡ್ಕ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಒತ್ತೆಕೋಲ ನಡಾವಳಿ ಫೆ. 25 ಮತ್ತು26ರಂದು ನಡೆಯಲಿದೆ. ಕಾರ್ಯಕ್ರಮವು ಪೂಜ್ಯ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ನೇತೃತ್ವದಲ್ಲಿ ನಡೆಯಲಿದೆ.

ಫೆ.೨೫ರಂದು ಬೆಳಗ್ಗೆ ಗಣಪತಿ ಹವನ, ನವಕ ಕಲಾಶಾಭಿಷೇಕ, ಮೇಲೇರಿಗೆ ಕೊಳ್ಳಿ ಜೋಡಣೆ, ನಂತರ ಶ್ರೀ ರಾಮ ಭಜನಾ ಮಂಡಳಿ ಕಾಚಿಲ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ಸಂಜೆ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ತೆಗೆಯುವುದು, ಮೇಲೇರಿಗೆ ಅಗ್ನಿ ಸ್ಪರ್ಶ, ರಾತ್ರಿ ಶ್ರೀ ರಾಮ ಭಜನಾ ಮಂಡಳಿ ಕಾಚಿಲ-ಕಲ್ಮಡ್ಕ, ತಾಳ ನಿನಾದಂ ಭಜನಾ ತಂಡ ಪಡ್ರಿನಂಗಡಿ ಮತ್ತು ಮರಾಠಿ ಯುವ ವೇದಿಕೆ ಭಜನಾ ತಂಡ ಪುತ್ತೂರು ಇವರಿಂದ ಕುಣಿತ ಭಜನೆ ಕಾರ್ಯಕ್ರಮ ನಡೆಯಲಿದೆ.

ರಾತ್ರಿ 12.30ರಿಂದ ವೈದೇಹಿ ಯುವತಿ ಮಂಡಲ ಕಾಚಿಲ ಕಲ್ಮಡ್ಕ ಹಾಗೂ ಊರವರಿಂದ ” ಭಾರತ ದರ್ಶನ” ವಿನೂತನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಫೆ.೨೬ ರಂದು ಬೆಳಗ್ಗೆ 5.00 ಗಂಟೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ ಮಾರಿಕಳ, ಪ್ರಸಾದ ವಿತರಣೆ ನಡೆಯಲಿದೆ. 7.00 ಗಂಟೆಗೆ ಶ್ರೀ ಮುಳ್ಳುಗುಳಿಗ ದೈವದ ನೇಮ ನಡೆದು ಪ್ರಸಾದ ವಿತರಣೆ ನಡೆಯಲಿದೆ.

See also  ಜಾತ್ರೆ ಅಂಗಡಿಗಳಿಗೆ ಶರತ್ ಪಂಪ್ ವೆಲ್ ಕೇಸರಿ ಧ್ವಜ ನೆಟ್ಟದ್ದೇಕೆ? ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಬೇಕೆ? ಇಲ್ಲಿದೆ ವಿಡಿಯೋ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget