ಕ್ರೈಂಬೆಂಗಳೂರುರಾಜಕೀಯರಾಜ್ಯ

ಲಕ್ಷ್ಮೀ ಹೆಬ್ಬಾಳ್ಕರ್‌ ಬಳಿ ಕಾಲು ಹಿಡಿದು ಕ್ಷಮೆ ಕೇಳದೆ ಹೋದ್ರೆ ಹತ್ಯೆ ಮಾಡುವುದಾಗಿ ಸಿ.ಟಿ.ರವಿಗೆ ಬೆದರಿಕೆ ಪತ್ರ..! 15 ದಿನಗಳ ಗಡುವು ನೀಡಿದ ಅನಾಮಧೇಯ ವ್ಯಕ್ತಿ..!

152

ನ್ಯೂಸ್ ನಾಟೌಟ್: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುರಿತು ಅಶ್ಲೀಲ ಪದ ಬಳಸಿದ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದೆ. 15 ದಿನದಲ್ಲಿ ಹೆಬ್ಬಾಳ್ಕರ್‌ ಬಳಿ ಕಾಲು ಹಿಡಿದು ಕ್ಷಮೆ ಕೇಳದೆ ಹೋದರೆ ಹತ್ಯೆ ಮಾಡುತ್ತೇವೆ ಎಂದು ಎಚ್ಚರಿಸಲಾಗಿದೆ.

ನಮ್ಮ ತಂಡ ಚಿಕ್ಕಮಗಳೂರಿನಲ್ಲಿ ಸಕ್ರಿಯವಾಗಿದೆ. ಲಕ್ಷ್ಮೀ ಅವರ ಕ್ಷಮೆ ಯಾಚಿಸದಿದ್ದರೆ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎಂದು ಬರೆದಿರುವ ಪತ್ರ ನಗರದ ಬಸವನಹಳ್ಳಿಯ ಸಿ.ಟಿ. ರವಿ ನಿವಾಸಕ್ಕೆ ಬಂದಿದೆ. ಈ ಪತ್ರದ ಕುರಿತು ಬಸವನಹಳ್ಳಿ ಪೊಲೀಸ್‌ ಠಾಣೆಗೆ ಸಿ.ಟಿ.ರವಿ ಆಪ್ತ ಸಹಾಯಕ ಚೇತನ್‌ ದೂರು ನೀಡಿದ್ದಾರೆ.

“ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Click

https://newsnotout.com/2025/01/mangaluru-kambala-inaguaration-ullala-mangaluru-v-news/
https://newsnotout.com/2025/01/rishab-shetty-kannada-news-anjaneya-swami-film-issue-kannada-news-cinema/
See also  ಕೋರಮಂಗಲ ಭೀಕರ ಅಪಘಾತಕ್ಕೆ ಇಂದ್ರಜಿತ್ ಲಂಕೇಶ್ ಕೊಟ್ರು ಕಾರಣ
  Ad Widget   Ad Widget   Ad Widget   Ad Widget   Ad Widget   Ad Widget   Ad Widget