ನ್ಯೂಸ್ ನಾಟೌಟ್: ಬೇಟೆಗೆ ತೆರಳಿದ್ದ ವೇಳೆ, ಬಂದೂಕು ಮಿಸ್ ಫೈರ್ ಆಗಿ ಯುವಕನೊಬ್ಬ ಸಾವಿಗೀಡಾದ ಘಟನೆ ಶಿವಮೊಗ್ಗದ್ದ ತೀರ್ಥಹಳ್ಳಿಯ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಕೊಳಾವರ ಗ್ರಾಮದ ಗೌತಮ್ (25) ಎಂದು ಗುರುತಿಸಲಾಗಿದೆ. ಬೇಟೆಗೆಂದು ಹೋಗಿದ್ದ ಸಂದರ್ಭದಲ್ಲಿ ಪ್ರಾಣಿಯೊಂದನ್ನು ಹೊಡೆಯಲು ಹೋಗಿ ಮಿಸ್ ಫೈರ್ ಆಗಿದೆ. ಈ ವೇಳೆ ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಯುವಕರ ಗುಂಪು ಕಟ್ಟೆಹಕ್ಲುಗೆ ಬೇಟೆಗಾಗಿ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
20 ರೂ. ಇದ್ದ ನೀರಿನ ಬಾಟಲ್ ಬೆಲೆ ಕೇದಾರನಾಥ ಶಿಖರದಲ್ಲಿ 100 ರೂಪಾಯಿ..! ಇಲ್ಲಿದೆ ಮನಕಲಕುವ ವಿಡಿಯೋ
ಸೂಟ್ ಕೇಸ್ ನಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆ..! ರೈಲಿನಿಂದ ಸೂಟ್ ಕೇಸ್ ಎಸೆದಿರುವ ಶಂಕೆ..!