ನ್ಯೂಸ್ ನಾಟೌಟ್: ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರ ಮಂಡಳಿ ಕಠಿಣ ನಿರ್ಣಯ ಕೈಗೊಂಡಿದೆ.ಇವರು ಕನ್ನಡಿಗರ ಭಾವನೆಗೆ ಧಕ್ಕೆ ಆಗುವಂತೆ ಮಾತನಾಡಿದ್ದಾರೆಂದು ಆರೋಪದ ಮೇರೆಗೆ ಕನ್ನಡ ಪರ ಸಂಘಟನೆಗಳು ಕನ್ನಡ ಚಿತ್ರರಂಗದಿಂದ ನಿಷೇಧಿಸಬೇಕೆಂದು ಆಗ್ರಹಿಸಿದ್ದವು.ಈ ಹಿನ್ನಲೆಯಲ್ಲಿ ಸೋಮವಾರ (ಮೇ 5) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅಧ್ಯಕ್ಷ ನರಸಿಂಹುಲು ನೇತೃತ್ವದಲ್ಲಿ ಸಭೆ ನಡೆದಿದೆ.
ಈ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು, ಪಹಲ್ಗಾಮ್ ವಿಚಾರವನ್ನು ಕನ್ನಡಿಗರಿಗೆ ಹೋಲಿಕೆ ಮಾಡಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದ್ದಾರೆ. ಇದಾದ ಬಳಿಕವೂ ಮತ್ತೆ ಲೈವ್ ಬಂದು ಅವರ ಮಾತನ್ನು ಅವರೇ ಸಮರ್ಥಿಸಿಕೊಂಡಿದ್ದಾರೆ. ಈ ಕ್ಷಣದಿಂದಲೇ ಅಸಹಕಾರ ತೋರಿಸಲು ತೀರ್ಮಾನಿಸಲಾಗಿದ್ದು, ಅವರ ಜೊತೆಗೆ ಯಾವುದೇ ಚಟುವಟಿಕೆ ಮಾಡಬಾರದು. ಅವರನ್ನು ಕರ್ನಾಟಕ ಇಂಡಸ್ಟ್ರಿಯಿಂದ ಅಸಹಕಾರ ಮಾಡಬೇಕು ಅಂತ ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರ ವಿರುದ್ದ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ ಎಂಬ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.
ಯಾರು ಕೂಡ ಅವರನ್ನು ಕರೆಯಬಾರದು ಮತ್ತು ಸಿನಿಮಾಗಳಲ್ಲಿ ಅವರ ಕೈಯಲ್ಲಿ ಹಾಡಿಸಬಾರದು. ಅವರ ಕೈಯಲ್ಲಿ ಲೈವ್ ಕಾರ್ಯಕ್ರಮ ಮಾಡಿಸಬಾರದು ಎಂದು ನರಸಿಂಹುಲು ಮಾಧ್ಯಮದವರ ಬಳಿ ಹೇಳಿದ್ದಾರೆ. ಯಾರಾದರೂ ಸೋನು ನಿಗಮ್ ಅವರನ್ನು ಕರೆದು ಹಾಡು ಹಾಡಿಸಿದ್ರೆ ಕ್ರಮಕೈಗೊಳ್ಳುತ್ತೇವೆ. ಯಾವ ರೀತಿ ಕ್ರಮಕೈಗೊಳ್ಳಬೇಕು ಅಂತ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ. ಸದ್ಯಕ್ಕೆ ಅಸಹಕಾರ ಅಂತ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ರು. ಇದೇ ವಿಚಾರಕ್ಕೆ ಮುಂದಿನ ದಿನಗಳಲ್ಲಿ ಎಲ್ಲರನ್ನು ಆಹ್ವಾನಿಸುತ್ತೇವೆ. ಅವತ್ತು ಅವರನ್ನು ಬ್ಯಾನ್ ಮಾಡಬೇಕಾ? ಎಷ್ಟು ದಿನ ಬ್ಯಾನ್ ಮಾಡಬೇಕು? ಯಾವ ರೀತಿ ಅವರ ವಿರುದ್ದ ಕ್ರಮಕೈಗೊಳ್ಳಬೇಕು ಅಂತ ತೀರ್ಮಾನ ಮಾಡುತ್ತೇವೆ ಎಂದು ಕನ್ನಡ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಹೇಳಿದ್ದಾರೆ.ಈ ವೇಳೆ ವಾಣಿಜ್ಯ ಮಂಡಳಿಯ ಕುಮಾರ್, ಸಂಗೀತ ನಿರ್ದೇಶಕ ಧರ್ಮವಿಶ್, ನಿರ್ದೇಶಕರ ಸಂಘದ ಅಧ್ಯಕ್ಷ ವಿಶ್ವನಾಥ್ , ಗಾಯಕಿ ಶಮಿತಾ ಮಲ್ನಾಡ್ ಸಭೆಯಲ್ಲಿ ಭಾಗಿಯಾಗಿದ್ದರು.