ನ್ಯೂಸ್ ನಾಟೌಟ್ :ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಮನಸ್ಸೋ ಇಚ್ಛೆ ಚಾಕು ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಇನ್ನು ಪತಿ ಅವಿನಾಶ್ (32) ಎನ್ನುವಾತ ಚಾಕುವಿನಿಂದ ಬರೋಬ್ಬರಿ 10 ಬಾರಿ ಚುಚ್ಚಿ ಕೊಂದು ಎಸ್ಕೇಪ್ ಆಗಿದ್ದಾನೆ.
ಕೀರ್ತಿ ಪೋಷಕರ ವಿರೋಧದ ನಡುವೆಯೂ ಆಕೆಯನ್ನು ನಾಲ್ಕು ವರ್ಷದ ಹಿಂದೆಯೇ ಪ್ರೀತಿಸಿ ಮದುವೆಯಾಗಿದ್ದ. ಇಬ್ಬರ ನಡುವೆ ಶುರುವಾದ ಸಣ್ಣ ಜಗಳದಲ್ಲಿ ಅವಿನಾಶ್, ಪ್ರೀತಿ ನಂಬಿ ಬಂದಿದ್ದ ಕೀರ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಕೀರ್ತಿ ಹಾಗೂ ಅವಿನಾಶ್ ಪರಸ್ಪರ ಪ್ರೀತಿಸಿದ್ದು, ನಾಲ್ಕು ವರ್ಷದ ಹಿಂದೆಷ್ಟೇ ಮದುವೆಯಾಗಿದ್ದು, ದಂಪತಿಗೆ ಎರಡೂವರೆ ವರ್ಷದ ಹೆಣ್ಣು ಸಹ ಮಗುವಿದೆ. ಅಲ್ಲದೇ ಕಳೆದ ವಾರ ಇಬ್ಬರೂ ಸಂಬಂಧಿಕರ ಮದುವೆಯಲ್ಲಿ ಖುಷಿ ಖುಷಿಯಲ್ಲಿ ಪಾಲ್ಗೊಂಡಿದ್ದರು. ಆದರೆ, ಏನೋ ಇಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಅವಿನಾಶ್, ಪತ್ನಿ ಕೀರ್ತಿಗೆ ಚಾಕುವಿನಿಂದ ಮನಸ್ಸೋ ಇಚ್ಛೇ ದಾಳಿ ಮಾಡಿ ಕೊಲೆ ಮಾಡಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕೀರ್ತಿ ಮೃತದೇಹವನ್ನು ರವಾನೆ ಮಾಡಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮಾಡಿ ಪರಾರಿಯಾಗಿರುವ ಅವಿನಾಶ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆದರೆ, ಕೊಲೆ ನಿಖರ ಕಾರಣ ಏನು ಎನ್ನುವುದೇ ನಿಗೂಢವಾಗಿದೆ.
ಪಾರ್ಕಿಂಗ್ ವಿಚಾರದ ಗಲಾಟೆಯಲ್ಲಿ ನೆರೆಮನೆಯವನ ಮೂಗು ಕಚ್ಚಿದ ಫ್ಲಾಟ್ ಮಾಲೀಕ..! ಸಿಸಿಟಿವಿ ವಿಡಿಯೋ ವೈರಲ್