Latestಕ್ರೈಂರಾಜ್ಯ

ಸಾಲದ ಕಂತು ಕಟ್ಟಿಲ್ಲ ಎಂದು 7 ವರ್ಷದ ಹೆಣ್ಣು ಮಗಳನ್ನು ಹೊತ್ತೊಯ್ದ ಫೈನಾನ್ಸ್ ಸಿಬ್ಬಂದಿ..! ಏನಿದು ಅಮಾನವೀಯ ಘಟನೆ..?

827

ನ್ಯೂಸ್ ನಾಟೌಟ್: ಮೈಸೂರಿನಲ್ಲಿ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದ್ದು, 1280 ರೂಪಾಯಿ ಸಾಲದ ಕಂತು ಕಟ್ಟಿಲ್ಲ ಎಂದು 7 ವರ್ಷದ ಹೆಣ್ಣು ಮಗುವನ್ನ ಮೈಕ್ರೋ ಫೈನಾನ್ಸ್​ ಸಿಬ್ಬಂದಿ ಹೊತ್ತೊಯ್ದಿರುವ ಆರೋಪ ಕೇಳಿಬಂದಿದೆ.

ಟಿ.ನರಸಿಪುರ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜಾಲಹಳ್ಳಿ ಗ್ರಾಮದ ನವೀನ್ ಹಾಗೂ ಪ್ರಮೀಳಾ ಜೀವನ ನಡೆಸಲು ಬಜಾಜ್ ಮೈಕ್ರೋ ಫೈನಾನ್ಸ್ ​ನಿಂದ 30 ಸಾವಿರ ರೂಪಾಯಿ ಸಾಲ ಮಾಡಿದ್ದರು.

30 ಸಾವಿರ ಸಾಲ ಪಡೆದಿದ್ದ ದಂಪತಿ, 13 ತಿಂಗಳು ಲೋನ್ ಕಟ್ಟಿದ್ದರು. ಈ ತಿಂಗಳು 4 ದಿನ ತಡವಾಗಿದ್ದಕ್ಕೆ ಚಿತ್ರಹಿಂಸೆ ನೀಡಿರುವ ಆರೋಪ ಕೇಳಿಬಂದಿದೆ. ಮೊದಲಿಗೆ ಮನೆಗೆ ಬಂದಿದ್ದ ಫೈನಾನ್ಸ್ ಸಿಬ್ಬಂದಿ ನವೀನ್ ತಾಯಿಗೆ ಬಾಯಿಗೆ ಬಂದು ಬೈದು ಹೋಗಿದ್ದಾರೆ ಎನ್ನಲಾಗಿದೆ.

ಬಳಿಕ ಪಕ್ಕದ ಊರಿನಲ್ಲಿದ್ದ ಮಗುವಿನ ಬಳಿ ತೆರಳಿ ನಿಮ್ಮ ಅಮ್ಮ ಎಲ್ಲಿ ತೋರಿಸು ಬಾ ಎಂದು ಕರೆದೊಯ್ದಿದ್ದಾರೆ. ಹೆಣ್ಣು ಮಗುವನ್ನು ಕಿಡ್ನಾಪ್ ಮಾಡಿದ ರೀತಿಯಲ್ಲಿ ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಮಗಳ ಕರೆದುಕೊಂಡು ಹೋದ ವಿಷಯ ತಿಳಿದು, ದಂಪತಿ ಫೈನಾನ್ಸ್ ಸಿಬ್ಬಂದಿಯ ಕಚೇರಿಗೆ ಆಘಾತದಲ್ಲಿ ಓಡಿ ಬಂದಿದ್ದಾರೆ. ಬಳಿಕ ಪೋಷಕರು ‘ತಾಳಿ ಅಡವಿಟ್ಟು ದುಡ್ಡು ಕೊಡ್ತೀವಿ, ಸಂಜೆ ಬನ್ನಿ’ ಎಂದು ಬೇಡಿಕೊಂಡಿದ್ದಾರೆ. ಅದಕ್ಕೆ ಒಪ್ಪದ ಸಿಬ್ಬಂದಿ ‘ಈಗಲೇ ದುಡ್ಡು ನೀಡಿ’ ಅಂತಾ ಚಿತ್ರ ಹಿಂಸೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂತರ ಹಣವನ್ನು ನೀಡಿ, ಹೆಣ್ಣು ಮಗುವನ್ನು ಬಿಡಿಸಿಕೊಂಡು ಬಂದಿದ್ದಾರೆ. ಈ ಪ್ರಕರಣವು ಮೈಸೂರು ಮಕ್ಕಳ ಸಮಿತಿ ಕಾರ್ಯಾಚರಣೆ ವೇಳೆ ಘಟನೆ ಬೆಳಕಿಗೆ ಬಂದಿದೆ.

ಪುತ್ತೂರು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಕನ್ನಡ ಕೋಗಿಲೆ ಖ್ಯಾತಿಯ ಯುವ ಗಾಯಕಿ ಅಖಿಲಾ..! 3 ವರ್ಷಗಳ ಹಿಂದೆ ಅಮೆರಿಕ ನಿವಾಸಿ ಧನಂಜಯ್ ಜೊತೆ ವಿವಾಹ

ಏರ್ ಇಂಡಿಯಾ ವಿಮಾನ ದುರಂತದ 215 ಮಂದಿಯ ಡಿಎನ್‌ ಎ ಮ್ಯಾಚ್‌, 198 ಮೃತದೇಹ ಹಸ್ತಾಂತರ

ಆ್ಯಪಲ್, ಫೇಸ್‌ಬುಕ್, ಗೂಗಲ್ ನ 16 ಶತಕೋಟಿ ಪಾಸ್‌ ವರ್ಡ್ ಗಳ ಸೋರಿಕೆ..! ಸಂದೇಶಗಳಲ್ಲಿ ಬಂದ ಅಪರಿಚಿತ ಲಿಂಕ್ ಗಳನ್ನು ಕ್ಲಿಕ್ ಮಾಡದಂತೆ ಫೇಸ್ ಬುಕ್ ವಾರ್ನಿಂಗ್..!

See also  ಅಪಘಾತಕ್ಕೀಡಾಗಿದ್ದ ವಾಹನ ಸವಾರರ ಬೆದರಿಸಿ ದೋಚಿದ ದುಷ್ಕರ್ಮಿಗಳು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget