Uncategorized

ಭಯೋತ್ಪಾದನೆಯ ಬಗ್ಗೆ ಪುಸ್ತಕ ಬರೆದವನಿಂದಲೇ ನಿರಂತರ ಬಾಂಬ್ ಬೆದರಿಕೆ..! ವಿಮಾನಯಾನ ಸಂಸ್ಥೆಗಳು ಸೇರಿದಂತೆ ಹಲವು ಕಡೆ ಬಾಂಬ್ ಬೆದರಿಕೆ ಒಡ್ಡಿದ್ದ ಕಿರಾತಕ..!

ನ್ಯೂಸ್ ನಾಟೌಟ್: ದೇಶದಾದ್ಯಂತ ಹಲವು ದಿನಗಳಿಂದ ವಿವಿಧ ವಿಮಾನಯಾನ ಸಂಸ್ಥೆಗಳ ಹಲವು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ ಶಂಕಿತ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

‘ಆರೋಪಿಯನ್ನು ಮಹಾರಾಷ್ಟ್ರದ ನಾಗ್ಪುರದ ಗೊಂಡಿಯಾ ಮೂಲದ 35 ವರ್ಷದ ಜಗದೀಶ್ ಉಯ್ಕೆ ಎಂದು ಗುರುತಿಸಲಾಗಿದೆ. ಈತ ಭಯೋತ್ಪಾದನೆ ಬಗ್ಗೆ ಪುಸ್ತಕ ಬರೆದಿದ್ದ ಎನ್ನಲಾಗಿದೆ. ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪ ಹಿನ್ನೆಲೆಯಲ್ಲಿ 2021ರಲ್ಲಿ ಪ್ರಕರಣವೊಂದರಲ್ಲಿ ಆತನನ್ನು ಬಂಧಿಸಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಡಿಸಿಪಿ ಶ್ವೇತಾ ಖೇಡ್ಕರ್ ನೇತೃತ್ವದ ತನಿಖಾ ತಂಡವು ಬಾಂಬ್ ಬೆದರಿಕೆ ಸಂದೇಶ ಬಂದಿದ್ದ ಇ–ಮೇಲ್‌ ಗಳನ್ನು ಪರಿಶೀಲನೆ ನಡೆಸಿತ್ತು. ಇದರ ಬೆನ್ನಲ್ಲೇ ಆರೋಪಿ ರಾಜ್ಯದಿಂದ ಪರಾರಿಯಾಗಿರುವುದು ತಿಳಿದು ಬಂದಿದ್ದು, ಆತನ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಆರೋಪಿಯು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ), ಕೇಂದ್ರ ರೈಲ್ವೆ ಸಚಿವರು, ವಿಮಾನಯಾನ ಸಂಸ್ಥೆಗಳು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಡಿಸಿಎಂ ದೇವೇಂದ್ರ ಫಡ್ನವೀಸ್, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಮತ್ತು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಬೆದರಿಕೆ ಇ–ಮೇಲ್‌ ಗಳನ್ನು ಕಳುಹಿಸಿರುವುದು ದೃಢಪಟ್ಟಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಾದ್ಯಂತ 15 ದಿನಗಳಲ್ಲಿ ಒಟ್ಟಾರೆ 410ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆಗಳು ಬಂದಿವೆ.

Click

https://newsnotout.com/2024/10/kannada-news-couples-are-ill-and-blind-son-nomore/
https://newsnotout.com/2024/10/marriagenvitation-card-get-viral-kannada-news-d/
https://newsnotout.com/2024/10/kerala-cm-pinray-vijayan-car-accid-lkannada-news-viral-video/
https://newsnotout.com/2024/10/kasaragod-150-temple-festival-cracker-issue-kannada-news-kerala/
https://newsnotout.com/2024/10/military-ambulance-kannada-news-boarder-viral-news-dog/

Related posts

ನಾಳೆಯೂ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ

ಮುಸ್ಲಿಂ ಕುಟುಂಬದಿಂದ ಅದ್ದೂರಿ ಗಣೇಶೋತ್ಸವ ಆಚರಣೆ

ಒಂದು ಸಾವಿರ ವರ್ಷದ ಹಿಂದಿನ ಶಿವಲಿಂಗ ಪತ್ತೆ