ನ್ಯೂಸ್ ನಾಟೌಟ್: ಪುಷ್ಪ 2 ಚಿತ್ರದ ಯಶಸ್ಸಿನ ನಂತರ ಥಿಯೇಟರ್ನಲ್ಲಿ ಕಾಲ್ತುಳಿತದಲ್ಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅನ್ನು ಪೊಲೀಸರು ಇಂದು(ಡಿ.13) ಅರೆಸ್ಟ್ ಮಾಡಿದ್ದಾರೆ.
ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಘಟನೆಯಿಂದಾಗಿ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 105, 118(1)r/w3(5) BNS ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ತಿಂಗಳ 4ರಂದು ಸಂಧ್ಯಾ ಥಿಯೇಟರ್ನಲ್ಲಿ ನಡೆದ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಅಲ್ಲಿಗೆ ಹೋಗಿದ್ದರು. ಆ ಕ್ಷಣದಲ್ಲಿ ಅಭಿಮಾನಿಗಳು ಮುಗಿಬಿದ್ದರು. ಅಲ್ಲಿ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಈ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್, ಸಿನಿಮಾ ಘಟಕ ಹಾಗೂ ಥಿಯೇಟರ್ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯಾವುದೇ ಮಾಹಿತಿ ನೀಡಿಲ್ಲ ಮತ್ತು ಸೂಕ್ತ ಭದ್ರತೆಯನ್ನು ಏರ್ಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ. ಜೊತೆಗೆ ಇಂದು ನಟ ಅಲ್ಲು ಅರ್ಜುನ್ ಬಂಧನವಾಗಿದ್ದಾರೆ.
Click