ಕ್ರೈಂವೈರಲ್ ನ್ಯೂಸ್ಸಿನಿಮಾ

ಪುಷ್ಪಾ 2 ನಟ ಅಲ್ಲು ಅರ್ಜುನ್ ಅರೆಸ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ

157

ನ್ಯೂಸ್ ನಾಟೌಟ್: ಪುಷ್ಪ 2 ಚಿತ್ರದ ಯಶಸ್ಸಿನ ನಂತರ ಥಿಯೇಟರ್‌ನಲ್ಲಿ ಕಾಲ್ತುಳಿತದಲ್ಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅನ್ನು ಪೊಲೀಸರು ಇಂದು(ಡಿ.13) ಅರೆಸ್ಟ್​​ ಮಾಡಿದ್ದಾರೆ.

ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಘಟನೆಯಿಂದಾಗಿ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 105, 118(1)r/w3(5) BNS ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದೇ ತಿಂಗಳ 4ರಂದು ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಅಲ್ಲಿಗೆ ಹೋಗಿದ್ದರು. ಆ ಕ್ಷಣದಲ್ಲಿ ಅಭಿಮಾನಿಗಳು ಮುಗಿಬಿದ್ದರು. ಅಲ್ಲಿ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಈ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್, ಸಿನಿಮಾ ಘಟಕ ಹಾಗೂ ಥಿಯೇಟರ್ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಾವುದೇ ಮಾಹಿತಿ ನೀಡಿಲ್ಲ ಮತ್ತು ಸೂಕ್ತ ಭದ್ರತೆಯನ್ನು ಏರ್ಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ. ಜೊತೆಗೆ ಇಂದು ನಟ ಅಲ್ಲು ಅರ್ಜುನ್ ಬಂಧನವಾಗಿದ್ದಾರೆ.

Click

https://newsnotout.com/2024/12/kannada-news-marriage-5-year-old-viral-bengaluru/
https://newsnotout.com/2024/12/police-commissioner-kannada-news-case-marriage-issue/
https://newsnotout.com/2024/12/bigboss-runner-drone-prathap-issue-arrested-by-tumakur-police/
https://newsnotout.com/2024/12/bus-kananda-news-8-standard-students-kerala-d/
https://newsnotout.com/2024/12/mysore-chamudeshwari-saree-issue-case-from-snehamai-krishna/
https://newsnotout.com/2024/12/ticket-collector-job-in-railway-kannada-news-viral-news-case/
See also  ಗ್ರಾ.ಪಂ.ಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿ ಹಾಕಿದ ಗ್ರಾಮಸ್ಥರು!ಗ್ರಾಮಸ್ಥರ ಈ ನಡೆಯ ಹಿಂದಿದೆಯಾ ರಾಜಕೀಯ ಮೋಸ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget