ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದ ಭೀಕರ ಹತ್ಯೆಯಂತೆಯೇ, ನಿನ್ನನ್ನು ಕತ್ತರಿಸಿ ಡ್ರಮ್ ನಲ್ಲಿ ಹಾಕಿಬಿಡ್ತೀನಿ ಎಂದು ಮಹಿಳೆಯೊಬ್ಬಳು ಮಚ್ಚು ಹಿಡಿದು ತನ್ನ ಪತಿಗೆ ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಗೂಂಡಾದ ಜಲ ನಿಗಮದಲ್ಲಿ ಕೆಲಸ ಮಾಡುತ್ತಿರುವ ಝಾನ್ಸಿ ಮೂಲದ ಜೂನಿಯರ್ ಎಂಜಿನಿಯರ್ (ಜೆಇ) ಧರ್ಮೇಂದ್ರ ಕುಶ್ವಾಹ ಮೇಲೆ ಪತ್ನಿ ಮಾಯಾ ಮೌರ್ಯ ಮತ್ತು ಆಕೆಯ ಪ್ರೇಮಿ ನೀರಜ್ ಮೌರ್ಯ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
UP: Junior Engineer Beaten by Wife in Gonda, Alleges Threats Similar to Meerut Case pic.twitter.com/HDD8wlXxIo
— The Times Patriot (@thetimespatriot) March 31, 2025
2016ರಲ್ಲಿ ಕುಶ್ವಾಹ ಬಸ್ತಿ ಜಿಲ್ಲೆಯ ನಿವಾಸಿ ಮಾಯಾ ಮೌರ್ಯ ರನ್ನು ಧರ್ಮೇಂದ್ರ ಕುಶ್ವಾಹ ಎಂಬವರು ಪ್ರೇಮ ವಿವಾಹವಾಗಿದ್ದರು. ಬಳಿಕ ಕುಶ್ವಾಹ 2022 ರಲ್ಲಿ ಮಾಯಾಳ ಹೆಸರಿನಲ್ಲಿ ಭೂಮಿಯನ್ನು ಖರೀದಿಸಿದ್ದರು. ನಂತರ ಮಾಯಾ ಸಂಬಂಧಿ ನೀರಜ್ ಮೌರ್ಯ ಗೆ ಆ ಜಾಗದಲ್ಲಿ ಮನೆ ನಿರ್ಮಾಣದ ಕೆಲಸವನ್ನು ವಹಿಸಿದ್ದರು.
ಇದಾದ ಬಳಿಕ ಮಾಯಾ ಹಾಗೂ ನೀರಜ್ ಜೊತೆಗೆ ಸಲುಗೆ ಬೆಳೆಸಿಕೊಂಡಿದ್ದಳು. ಕೋವಿಡ್ -19 ಸಮಯದಲ್ಲಿ ನೀರಜ್ ಎಂಬಾತನ ಪತ್ನಿಯ ಮರಣದ ನಂತರ ಇವರ ಸಂಬಂಧ ಇನ್ನೂ ಹೆಚ್ಚಾಗಿತ್ತು. 2024 ರಂದು ಮಾಯಾ ಮತ್ತು ನೀರಜ್ ಖಾಸಗಿ ಕ್ಷಣಗಳನ್ನು ಧರ್ಮೇಂದ್ರ ಕುಶ್ವಾಹ ಗಮನಿಸಿ ಗಲಾಟೆ ಮಾಡಿದ್ದರು. ಈ ವೇಳೆ ಅವರ ಮೇಲೆ ಹಲ್ಲೆ ಮಾಡಿ, ಮಾಯಾ ಮನೆ ತೊರೆದಿದ್ದಳು ಎನ್ನಲಾಗಿದೆ.
2024ರ ಆಗಸ್ಟ್ ನಲ್ಲಿ ನೀರಜ್ ಜೊತೆಗೆ ಬಂದಿದ್ದ ಮಾಯಾ ಮನೆಯ ಬೀಗ ಮುರಿದು 15 ಗ್ರಾಂ ಚಿನ್ನದ ಸರ ಮತ್ತು ನಗದು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಧರ್ಮೇಂದ್ರ ಕುಶ್ವಾಹ ಸೆಪ್ಟೆಂಬರ್ 2024ರಲ್ಲಿ ದೂರು ದಾಖಲಿಸಿದ್ದರು. ಇನ್ನೂ, ಇದೇ ಮಾರ್ಚ್ ತಿಂಗಳ 29ರಂದು ಮಾಯಾ ಮತ್ತು ನೀರಜ್ ತನ್ನ ತಾಯಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಇತ್ತೀಚೆಗೆ ಮೀರತ್ ನಲ್ಲಿ ನಡೆದ ವ್ಯಕ್ತಿಯ ಕೊಲೆ ಮಾದರಿಯಲ್ಲೇ ನನ್ನನ್ನು ಹತ್ಯೆಗೈದು ಡ್ರಮ್ ನಲ್ಲಿ ಪ್ಯಾಕ್ ಮಾಡುತ್ತೇನೆ ಎಂದು ಮಾಯಾ ಬೆದರಿಕೆ ಹಾಕಿದ್ದಾಳೆ ಎಂದು ಆಕೆಯ ಗಂಡ ಧರ್ಮೇಂದ್ರ ಕುಶ್ವಾಹ ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ವಕ್ಫ್ ಮಸೂದೆ ವಿರೋಧಿಸಿ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಈದ್ ಪ್ರಾರ್ಥನೆ..! ಎನಿದು ವಕ್ಫ್ ಮಸೂದೆ ತಿದ್ದುಪಡಿ..?
ಸೌದಿ ಅರೇಬಿಯಾದ ಮಸೀದಿ ಎದುರು ಮಹಿಳೆ ಮತ್ತು ಭದ್ರತಾ ಸಿಬ್ಬಂದಿ ನಡುವೆ ಪರಸ್ಪರ ಕಪಾಳಮೋಕ್ಷ..! ವಿಡಿಯೋ ವೈರಲ್
ಫ್ಲೈ ಓವರ್ ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್..! ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ..!