ಉಡುಪಿಉಡುಪಿಕರಾವಳಿದಕ್ಷಿಣ ಕನ್ನಡಮಂಗಳೂರು

ಕರಾವಳಿ: ಮೇ.22 ವರೆಗೆ ಮೀನುಗಾರಿಕೆ ತೆರಳದಂತೆ ಜಿಲ್ಲಾಡಳಿತ ಖಡಕ್ ಸೂಚನೆ..! ಜಿಲ್ಲಾಡಳಿತ ಹೇಳಿದ್ದೇನು..?

214
representative image used

ನ್ಯೂಸ್ ನಾಟೌಟ್: ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ ದಕ್ಷಿಣ ಕನ್ನಡ ಮತ್ತು ಉಡುಪಿಯ ಮೀನುಗಾರರಿಗೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಐದು ದಿನಗಳ ಕಾಲ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ 40 ಕಿ.ಮೀನಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಜಿಲ್ಲೆಯ ಬಂದರಿನಲ್ಲಿ ಬೋಟುಗಳು ಲಂಗುರು ಹಾಕುತ್ತಿವೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ಬಳಿಯ ಕಾಳಿ ನದಿ ಸಮುದ್ರಕ್ಕೆ ಸಂಗಮ ಆಗುವ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ. ಸಮುದ್ರದ ಮಧ್ಯದಲ್ಲಿ ದೋಣಿ ಮೂಲಕ ತೆರಳಿ ಹೋಮ್ ಹಾಕಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಲಾಗಿತ್ತು. ಆದರೆ ಈಗ ಮಳೆಯ ಜೊತೆ ವಾಯುಭಾರ ಕುಸಿತದ ಭೀತಿಯಿಂದ ಮೀನುಗಾರಿಕೆ ಸ್ಥಗಿತವಾಗಿದೆ.

Click 👇

https://newsnotout.com/2024/05/hotel-issue-boyfriend-and-issue
https://newsnotout.com/2024/05/mobile-phone-and-minor-brothers-issue
https://newsnotout.com/2024/05/janhvi-kapoor-at-her-12-years-of-age
See also  ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಬಲೆಗೆ NIA ಬಿಗ್ ಸ್ಕೆಚ್ ..! ಮೂವರು ಹಂತಕರ ಮಾಹಿತಿ ಕೊಟ್ರೆ ಲಕ್ಷ..ಲಕ್ಷ ಬಹುಮಾನ..! ಯಾರಿವರು ಮೂವರು ಆರೋಪಿಗಳು..?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget