Latestಬೆಂಗಳೂರುರಾಜಕೀಯರಾಜ್ಯ

ಆಂಧ್ರಕ್ಕೆ 4 ಆನೆಗಳನ್ನು ಕಳುಹಿಸಿದ ಕರ್ನಾಟಕ ಸರ್ಕಾರ ..! ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಮೂಲಕ ಹಸ್ತಾಂತರ..!

662

ನ್ಯೂಸ್ ನಾಟೌಟ್: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ 4 ಕುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ವಿಧಾನಸೌಧ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಈ ಹಸ್ತಾಂತರ ಕಾರ್ಯಕ್ರಮ ನಡೆದಿದೆ. ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಆನೆಗಳ ಹಸ್ತಾಂತರಿಸುವ ದಾಖಲೆಯನ್ನು ಸ್ವೀಕಾರ ಮಾಡಿದ್ದಾರೆ.

ವಿಧಾನಸೌಧ ಮುಂಭಾಗ ಜ್ಯೂನಿಯರ್ ಅಭಿಮನ್ಯು, ರಂಜನ್, ಕೃಷ್ಣ, ದೇವ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಯುದ್ಧಕ್ಕೆ ಹೋಗೋ ಸೈನಿಕರಂತೆ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ ಈ 4 ಕುುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ಮಹೇಂದ್ರ ಆನೆ ಕುಮ್ಕಿ ಆನೆಗಳ ಬೆಂಬಲಕ್ಕೆ ಬಂದಿದ್ದು, ಆಂಧ್ರಪ್ರದೇಶಕ್ಕೆ ಕಳಿಸಿದ ಬಳಿಕ ವಾಪಸ್ ಆಗಲಿದೆ.

ಆಂಧ್ರಪ್ರದೇಶಕ್ಕೆ ರಾಜ್ಯದ ಕುಮ್ಮಿ ಆನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭೈರತಿ ಸುರೇಶ್, ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ ಸೇರಿದಂತೆ ಆಂಧ್ರಪ್ರದೇಶದ ಹಿರಿಯ ಅಧಿಕಾರಿಗಳು ಸಹ ಹಾಜರಿದ್ದರು.

ರಾಜ್ಯದ ಆನೆಗಳನ್ನ ನೆರೆಯ ರಾಜ್ಯಕ್ಕೆ ಕಳುಹಿಸಲು ಪ್ರಮುಖವಾದ ಕಾರಣ ಅರಣ್ಯ ಭಾಗದಲ್ಲಿ ಕಾಡು ಪ್ರಾಣಿಗಳು ಹಾಗೂ ಮಾನವನ ಸಂಘರ್ಷ ತಪ್ಪಿಸೋದು ಎನ್ನಲಾಗಿದೆ. ಪ್ರಾಣಿಗಳನ್ನು ಹಿಡಿಯಲು ಈ ಕುಮ್ಮಿ ಆನೆಗಳನ್ನು ಬಳಕೆ ಮಾಡಲಾಗುತ್ತೆ. ದುಬಾರೆ ಸೇರಿದಂತೆ ಬೇರೆ ಬೇರೆ ಕಡೆ ಈ ಆನೆಗಳಿಗೆ ತರಬೇತಿ ನೀಡಲಾಗಿದೆ. ಮಾನವ-ಕಾಡು ಪ್ರಾಣಿಗಳ ಸಂಘರ್ಷ ತಪ್ಪಿಸಲು ಪಳಗಿಸಿದ ಕುಮ್ಮಿ ಆನೆಗಳನ್ನೇ ಆಂಧ್ರಕ್ಕೆ ಹಸ್ತಾಂತರ ಮಾಡಲಾಗಿದೆ.

“ಕೇವಲ ನಮಗೆ ಆನೆ ಕೋಡೋಕೆ ಸಿದ್ದರಾಮಯ್ಯ ಸರ್ಕಾರ ತೀರ್ಮಾನ ಮಾಡಿದೆ. ಬರೀ ಆನೆ ನೀಡೋದು ಅಲ್ಲ ಸಹೋದರ ರಾಜ್ಯವಾಗಿ ಕರ್ನಾಟಕ ನಮ್ಮ ಜೊತೆಗಿದೆ. ಇದರಿಂದ ಎರಡು ರಾಜ್ಯದ ಅರಣ್ಯ ಸುರಕ್ಷಿತವಾಗಿರುತ್ತೆ. ಕರ್ನಾಟಕದ ಸರ್ಕಾರ ಹಾಗೂ ಜನತೆಗೆ ನಾವು ಧನ್ಯವಾದ ತಿಳಿಸುತ್ತೇನೆ” ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.  

ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ 26 ನಕ್ಸಲೀಯರ ಹತ್ಯೆ..! ದಟ್ಟ ಅರಣ್ಯದಲ್ಲಿ ಕಾರ್ಯಾಚರಣೆ

ಆಕಸ್ಮಿಕವಾಗಿ ಸಿಡಿದ ಗುಂಡು, ಲಷ್ಕರ್‌ ಸಹ ಸ್ಥಾಪಕ ಉಗ್ರನ ಸ್ಥಿತಿ ಚಿಂತಾಜನಕ..! ಏನಿದು ಘಟನೆ..?

See also  ಇಂದು(ಮಾ.29) ಈ ವರ್ಷದ ಮೊದಲ ಸೂರ್ಯ ಗ್ರಹಣ, ಯುಗಾದಿಗೂ ಮೊದಲು ಬಂದ ಸೂರ್ಯ ಗ್ರಹಣದಿಂದ ಧಾರ್ಮಿಕ ಮಹತ್ವ..!
  Ad Widget   Ad Widget     Ad Widget   Ad Widget   Ad Widget   Ad Widget