ನ್ಯೂಸ್ ನಾಟೌಟ್: ದೇಹ ದಪ್ಪಗಿರುವುದಕ್ಕೆ ಹುಡುಗಿ ಸಿಗುತ್ತಿಲ್ಲವೆಂದು ಯುವಕ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಘಟನೆ ಬೆಂಗಳೂರು ಉತ್ತರ ತಾಲೂಕಿನ ನಾರಾಯಣಪ್ಪನಪಾಳ್ಯದಲ್ಲಿ ನಡೆದಿದೆ. ಬಾಡಿಗೆ ಮನೆಯಲ್ಲಿ ಆಟೋ ಚಾಲಕ ವೆಂಕಟೇಶ್(29) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಇಂದು(ಜ.17) ಪ್ರಕರಣ ದಾಖಲಾಗಿದೆ.
ಗೋವಿಂದರಾಜು ಮತ್ತು ಮಂಗಳಮ್ಮ ದಂಪತಿಯ ಪುತ್ರ ವೆಂಕಟೇಶ್ ಮದುವೆಯಾಗಲು ಸುಮಾರು 15 ಹುಡುಗಿಯರನ್ನ ನೋಡಿದ್ದರು ಎನ್ನಲಾಗಿದೆ. ಎಲ್ಲಾ ಹುಡುಗಿ ಪೋಷಕರು ಹುಡುಗ ದಪ್ಪಗಿದ್ದಾನೆಂದು ನಿರಾಕರಿಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆ. ಫೋನ್ ತೆಗೆಯದಿದ್ದಕ್ಕೆ ಚಿಕ್ಕಮ್ಮ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.