ನ್ಯೂಸ್ ನಾಟೌಟ್: ಸೇತುವೆಯಿಂದ ಕೆರೆಗೆ ಬಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಜೀವದ ಹಂಗು ತೊರೆದು ಗೃಹರಕ್ಷಕ ಸಿಬ್ಬಂದಿ ರಕ್ಷಿಸಿರುವ ಪ್ರಸಂಗ ಚಾಮರಾಜನಗರದ ಕೊಳ್ಳೇಗಾಲದಲ್ಲಿ ಇಂದು(ಡಿ.8) ನಡೆದಿದೆ.
ಹನೂರು ತಾಲೂಕಿನ ಕಣ್ಣೂರಿನ ರಾಜಮ್ಮ (17) ಕೆರೆಗೆ ಬಿದ್ದಿದ್ದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಕೊಳ್ಳೇಗಾಲದ ಚಿಕ್ಕರಂಗನಾಥಕೆರೆ ಯುವತಿ ಈಕೆ ಎನ್ನಲಾಗಿದೆ. ಬಿದ್ದ ತಕ್ಷಣ ಹತ್ತಿರದಲ್ಲೇ ಇದ್ದ ಗೃಹರಕ್ಷಕ ಸಿಬ್ಬಂದಿ ಕೃಷ್ಣಮೂರ್ತಿ ಎಂಬವರು ಕೆರೆಗೆ ಧುಮುಕಿ ವಿದ್ಯಾರ್ಥಿನಿಯ ರಕ್ಷಣೆ ಮಾಡಿದ್ದಾರೆ.
ಜೆ.ಎಸ್.ಎಸ್ ಕಾಲೇಜಿನ ಪ್ರಥಮ ಪಿ.ಯು ವಿದ್ಯಾರ್ಥಿನಿ ಕೆರೆಗೆ ಬಿದ್ದಾಗ ಸ್ಥಳೀಯರ ಸಹಕಾರದಿಂದ ಕೃಷ್ಣಮೂರ್ತಿ ಮೇಲಕ್ಕೆತ್ತಿದ್ದಾರೆ ಎನ್ನಲಾಗಿದೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
Click