ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಮೊಬೈಲ್ ಬಳಸದಂತೆ ಬೈದ ತಂದೆ, ಮನನೊಂದು 18ರ ಯುವತಿ ನೇಣಿಗೆ ಶರಣು..!

ನ್ಯೂಸ್ ನಾಟೌಟ್: ಇತ್ತೀಚೆಗೆ ಮೊಬೈಲ್ ಫೋನ್ ಪ್ರಾಣಕ್ಕಿಂತಲೂ ಹೆಚ್ಚಿನ ಬೆಲೆ ಇದೆ ಅನ್ನುವ ರೀತಿ , ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಲಿಖಿತಾ(18) ನೇಣಿಗೆ ಶರಣಾದ ವಿದ್ಯಾರ್ಥಿ ಎನ್ನಲಾಗಿದೆ. ಸುಧಾ ಮತ್ತು ನಾರಾಯಣ ದಂಪತಿಯ ಪುತ್ರಿಯಾದ ಮೃತ ಲಿಖಿತಾ, ಪ್ಯಾರಾಮೆಡಿಕಲ್‌ ವ್ಯಾಸಂಗ ಮಾಡುತ್ತಿದ್ದರು. ಹೆತ್ತವರನ್ನ ಸಾಕುವ ಕನಸು ಕಂಡಿದ್ದ ಸುಧಾ ಹಾಗೂ ನಾರಾಯಣ ಅವರ ಮುದ್ದಿನ ಮಗಳು ಲಿಖಿತಾ ಒಳ್ಳೆಯ ವಿದ್ಯಾಬ್ಯಾಸ ಮಾಡುತ್ತಿದ್ದಳು. ಓದಿನಲ್ಲಿಯೂ ಮುಂದೆ ಇದ್ದ ಲಿಖಿತಾ, ಇತ್ತೀಚಿಗೆ ಫೋನಿನ ಗೀಳು ಹತ್ತಿಸಿಕೊಂಡಿದ್ದಳಂತೆ. ಯಾವಾಗಲೂ ಫೋನಿನಲ್ಲಿ ಮಾತನಾಡಿತ್ತಿದ್ದ ಆಕೆ, ಚಾಟಿಂಗ್, ಸ್ನ್ಯಾಪ್, ಇನ್ಸ್ಟಾ, ಫೇಸ್‌ಬುಕ್ ಎಂದು ಫೋನ್‌‌ನಲ್ಲಿ ಬ್ಯುಸಿ ಇರುತ್ತಿದ್ದಳು. ಇದನ್ನ ಗಮನಿಸಿದ್ದ ಲಿಖಿತಾ ತಂದೆ ನಾರಯಣ್ ಬೆಳಿಗ್ಗೆ ಬೈದು ಬುದ್ದಿ ಹೇಳಿದ್ದಾರೆ. ಈ ಹಿನ್ನಲೆ ಯುವತಿ ರೂಂ ಸೇರಿದ್ದರು. ಬಳಿಕ ಎರಡು ಗಂಟೆ ನಂತರ ರೂಂ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ಯಾನ್​ಗೆ ಸೀರೆ ಬಳಸಿ ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ತಿಳಿಸಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಾಗಿದೆ.

Related posts

ರಾಕಿಂಗ್‌ ಸ್ಟಾರ್‌ ಜೊತೆ ಮಿಂಚಲಿರುವ ಬಾಲಿವುಡ್‌ ನಟಿ..! ಲೇಡಿ ಸೂಪರ್‌ಸ್ಟಾರ್‌ ನಯನತಾರಾ ಸೇರಿದಂತೆ ಹಲವು ನಟಿಯರು ‘ಟಾಕ್ಸಿಕ್‌’ ನಲ್ಲಿ ಭಾಗಿ..!

ತಂದೆ-ಮಗ ನಿಗೂಢವಾಗಿ ಸಾವು, ಮನೆಯ ಅಂಗಳದಲ್ಲಿಯೇ ಶವವಾಗಿ ಪತ್ತೆ

ಚುನಾವಣಾ ಕುಸ್ತಿಯಲ್ಲಿ ಗೆದ್ದ ಕುಸ್ತಿ ಪಟು, ವಿನೇಶ್‌ ಫೋಗಟ್‌ ಗೆ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯ