ನ್ಯೂಸ್ ನಾಟೌಟ್: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಮಗುವಿಗೆ ಹಗ್ಗ ಸುತ್ತಿ ಪ್ರಾಣ ಕಳೆದುಕೊಂಡ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ.8 ರವಿವಾರ ಸಂಜೆ ನಡೆದಿದೆ.
ಬುಡೋಳಿ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿ. ಈಕೆ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದುಕೊಂಡಿದೆ ಎನ್ನಲಾಗಿದೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
Click