ಕ್ರೀಡೆ/ಸಿನಿಮಾಕ್ರೈಂಬೆಂಗಳೂರು

‘ಅಗ್ನಿಸಾಕ್ಷಿ’ ಧಾರಾವಾಹಿ ನಟನಾಗಿದ್ದ ಸಂಪತ್ ಜಯರಾಮ್‌ ಆತ್ಮಹತ್ಯೆ!

241

ನ್ಯೂಸ್ ನಾಟೌಟ್ : ಹಲವು ಸೀರಿಯಲ್ ಗಳಲ್ಲಿ ನಟಿಸಿದ್ದ ನಟ ಸಂಪತ್‌ ಜಯರಾಮ್‌ ಅವರು ಆತ್ಮಹತ್ಯೆ ಶರಣಾಗಿದ್ದಾರೆ. ಇತ್ತಿಚೀನ ದಿನಗಳಲ್ಲಿ ಯಾವುದೇ ಅವಕಾಶ ಸಿಗದೇ ಸಿನಿಮಾರಂಗದಿಂದ ಕೆಲ ದಿನಗಳ ಕಾಲ ದೂರ ಉಳಿದಿದ್ದರು ಎನ್ನಲಾಗಿದೆ. 

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪು ಸಮೀಪದ ಗ್ರಾಮದವರಾಗಿದ್ದ ಇವರು, ನಟನೆಯಲ್ಲಿ ಮುಂದುವರಿಯಬೇಕೆಂದು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಸಂಪತ್ ಕಿರುತೆರೆಯಷ್ಟೇ ಅಲ್ಲದೆ ಬೆಳ್ಳಿತೆರೆಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದ ನಟ. ಇತ್ತೀಚೆಗೆ ಬಿಡುಗಡೆಯಾಗಿದ್ದ ರಾಜೇಶ್ ಧ್ರುವ ನಿರ್ದೇಶಿಸಿದ್ದ ‘ಶ್ರೀ ಬಾಲಾಜಿ ಫೋಟೊ ಸ್ಟುಡಿಯೋ’ ಸಿನಿಮಾದಲ್ಲಿ ನಟಿಸಿದ್ದರು. ಸಂಪತ್ ಜಯರಾಮ್ ಅವರು ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

https://www.facebook.com/permalink.php?story_fbid=192979163587066&id=100086249490351: ‘ಅಗ್ನಿಸಾಕ್ಷಿ’ ಧಾರಾವಾಹಿ ನಟನಾಗಿದ್ದ ಸಂಪತ್ ಜಯರಾಮ್‌ ಆತ್ಮಹತ್ಯೆ!
https://www.facebook.com/permalink.php?story_fbid=192979163587066&id=100086249490351

ಸಂಪತ್​ ಜಯರಾಮ್​ ನಿಧನಕ್ಕೆ ನಟ ರಾಜೇಶ್​ ಧ್ರುವ ಅವರು ಸಂತಾಪ ಸೂಚಿಸಿದ್ದಾರೆ. ‘ನಿನ್ನ ಅಗಲಿಕೆ ತಡ್ಕೊಳೋ ಶಕ್ತಿ ನಮಗಿಲ್ಲ ಮಗ. ಅದೆಷ್ಟೋ ಸಿನಿಮಾ ಮಾಡೋದಿದೆ. ಅದೆಷ್ಟೋ ಜಗಳ ಬಾಕಿ ಇದೆ. ಕಂಡ ಕನಸು ನನಸು ಮಾಡ್ಕೋಳೋಕೆ ಇನ್ನೂ ಸಾಕಷ್ಟು ಸಮಯ ಇದೆ. ಇನ್ನೂ ನಿನ್ನ ದೊಡ್ಡ ದೊಡ್ಡ ಸ್ಟೇಜ್​ನಲ್ಲಿ ನೋಡೋದು ಇದೆ ಕಣೋ. ವಾಪಾಸ್ ಬಾರೋ ಪ್ಲೀಸ್’ ಎಂದು ಫೇಸ್‌ಬುಕ್‌ನಲ್ಲಿ ಭಾವನಾತ್ಮಕವಾಗಿ ಫೋಸ್ಟ್​ ಮಾಡಿದ್ದಾರೆ.

See also  KSRTC ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ..! ಸ್ಥಳದಲ್ಲೇ ಸಾವು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget